ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಆದೇಶ ಹೊರಡಿಸಿದೆ.
ಈ ಆದೇಶ ಹೊರಬೀಳುತ್ತಿದ್ದಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ನಿನ್ನೆ ಹೈಕೋರ್ಟ್ 17ಎ ಅನ್ವಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಇಂದು ಜನಪ್ರತಿನಿಧಿಗಳ ಕೋರ್ಟ್ ಪಿಸಿ ಕಾಯ್ದೆ 7ಸಿ ಅಡಿ ತನಿಖೆ ನಡೆಸುವಂತೆ ಆದೇಶಿಸಿ ತೀರ್ಪು ನೀಡಿದೆ. ತೀರ್ಪಿನ ಅನ್ವಯ ಮೈಸೂರು ಲೋಕಾಯುಕ್ತಗೆ ತನಿಖೆ ನಡೆಸಲು ಹೇಳಿದೆ. ಹೀಗಾಗಿ ತನಿಖೆ ಎದುರಿಸಲು ನಾವು ತಯಾರಿದ್ದೇವೆ ಎಂದರು.
ಜನಪ್ರತಿನಿಧಿ ಕೋರ್ಟ್ನ ಆದೇಶವನ್ನು ನಾನು ಇನ್ನೂ ಓದಿಲ್ಲ. ಕೇರಳದಿಂದ ಬಂದಮೇಲೆ ಆದೇಶದಲ್ಲಿ ಏನಿದೆ ಎಂದು ನೋಡುತ್ತೇನೆ. ಕೋರ್ಟ್ ಆದೇಶದ ದೊರಕಿದ ನಂತರ ವಕೀಲರೊಂದಿಗೆ ಚರ್ಚಿಸಿ ಆ ನಂತರ ಸುಪ್ರೀಂಕೋರ್ಟ್ಗೆ ಮೇಲನ್ಮವಿ ಸಲ್ಲಿಸುತ್ತೇನೆ ಎಂದು ಹೇಳಿದರು.
ಹೈಕೋರ್ಟ್ ತೀರ್ಪು ಬಂದ ನಂತರ ನಿನ್ನೆಯೂ ಹೇಳಿದ್ದೆ, ಈಗಲೂ ಹೇಳುತ್ತೇನೆ ನಾನು ತನಿಖೆಗೆ ಹೆದರುವುದಿಲ್ಲ. ದೂರುದಾರರು ಮೈಸೂರಿನವರಾಗಿದ್ದಾರೆ. ಹೀಗಾಗಿ ಅಲ್ಲಿಯೇ ತನಿಖೆ ನಡೆಯುತ್ತದೆ. ಇಂದು ಕೋರ್ಟ್ ನೀಡುವ ಆದೇಶದ ಪ್ರತಿಯನ್ನು ಪಡೆದುಕೊಂಡ ನಂತರ ಮುಂದಿನ ನಿರ್ಧಾರದ ಬಗ್ಗೆ ನಾಳೆ(ಸೆ.26) ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ರಚಿಸಿರುವ ತನಿಖಾ ಆಯೋಗಕ್ಕೆ ಕೋರ್ಟ್ ಯಾವುದೇ ತಡೆ ನೀಡಿಲ್ಲದ ಕಾರಣ ಆ ತನಿಖೆ ಎಂದಿನಂತೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದು,…
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…
ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…
ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್…
ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…
ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…