Mysore
22
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಮುಡಾ ಕೇಸ್‌ ವಿಚಾರಣೆ: ಇಂದು ಯಾವುದೇ ಕಾರ್ಯಕ್ರಮ ನಿಗದಿ ಮಾಡಿಕೊಳ್ಳದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕೋರ್ಟ್‌ನಲ್ಲಿಂದು ಮುಡಾ ಕೇಸ್‌ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದರಿಸಲಾಗಿದೆ.

ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕ್ರಮ ಖಂಡಿಸಿ ಸಿದ್ದರಾಮಯ್ಯ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ವಕೀಲರ ಜೊತೆ ಚರ್ಚೆ ಮತ್ತು ಕೋರ್ಟ್‌ ಕಲಾಪ ನಡೆಯಲಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಯಾವುದೇ ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಂಡಿಲ್ಲ.

ಹೈಕೋರ್ಟ್‌ನಲ್ಲಿ ಸರ್ಕಾರದ ಪರ ವಕೀಲ ಅಡ್ವೋಕೇಟ್‌ ಜನರಲ್‌ ಶಶಿಕಿರಣ್‌ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆಪ್ಟೆಂಬರ್.‌12ರಂದು ಕೂಡ ವಾದ ಸರಣಿ ಮುಂದುವರಿಯಲಿದೆ. ಅಂದು ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್‌ ಆದೇಶ ನೀಡುವ ಸಾಧ್ಯತೆ ತೀರ ಕಡಿಮೆ ಎಂದು ತಿಳಿದುಬಂದಿದೆ.

Tags:
error: Content is protected !!