ರಾಜ್ಯ

ಮುಡಾ ಪ್ರಕರಣ ರಾಜಕೀಯ ಪ್ರೇರಿತ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತ. ಆಸ್ತಿಗೆ ಪ್ರತಿಯಾಗಿ ಪರಿಹಾರ ಕೇಳಿದ್ದನ್ನು ಅಪರಾಧ ಎಂದು ಬಿಂಬಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಪ್ರಕರಣದಲ್ಲಿ ಬಿಜೆಪಿ ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಿದ್ದು ನಮಗೆ ಗೊತ್ತಿದೆ. ಇದರ ಹಿಂದೆ ಯಾವ ರೀತಿಯ ರಾಜಕೀಯ ಇದೆ ಎಂದು ನಮಗೆಲ್ಲಾ ಅರ್ಥವಾಗಿದೆ ಎಂದರು.

ಲೋಕಾಯುಕ್ತ ತನಿಖೆ ಮುಖ್ಯಮಂತ್ರಿ ಅಥವಾ ಇನ್ಯಾರದೋ ಅಣತಿಯಂತೆ ನಡೆದಿಲ್ಲ. ನ್ಯಾಯಾಲಯದ ಉಸ್ತುವಾರಿಯಲ್ಲಿ ವಿಚಾರಣೆಯಾಗಿದೆ. ಮೇಲಾಗಿ ಲೋಕಾಯುಕ್ತ ಚುನಾವಣಾ ಆಯೋಗದಂತೆ ಸಂಪೂರ್ಣ ಸ್ವಾಯತ್ತ ಸಂಸ್ಥೆ. ಅಲ್ಲಿ ಮುಖ್ಯಮಂತ್ರಿಯವರ ಹಸ್ತಕ್ಷೇಪ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳ್ದೆ? ಇದು ರಾಜಕೀಯ ಪ್ರೇರಿತ ಆರೋಪ. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ ಎಂದರು.

ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಅವರು ಕೊಟ್ಟಿದ್ದಾರೆ. ನಮಗೆ ಇಂತಹುದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು ಎಲ್ಲಿಯೂ ಕೇಳಿಲ್ಲ. ಆದರೂ ಅನಗತ್ಯ ಗೊಂದಲ ಬೇಡ ಎಂದು ಅವರು ಈ ನಿವೇಶನಗಳನ್ನು ವಾಪಸ್ ನೀಡಿದ್ದಾರೆ ಎಂದು ತಿಳಿಸಿದರು.

ಯಾವುದೇ ಪ್ರಕರಣ ದಾಖಲಿಸುವಾಗ ಅದಕ್ಕೆ ಪೂರಕವಾದ ದಾಖಲೆ ಬೇಕು. ಲೋಕಾಯುಕ್ತ ಸಂಸ್ಥೆ ತನ್ನ ಕರ್ತವ್ಯ ಮಾಡಿದೆ. ಬಿಜೆಪಿಯವರು ತಮ ಹೋರಾಟ ಮಾಡಿಕೊಳ್ಳಲಿ. ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಲು ನಮಗೆ ಗೊತ್ತಿಲ್ಲವೇ? ಇದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕುತಂತ್ರ. ಇದು ಹೆಚ್ಚು ದಿನ ನಡೆಯುವುದಿಲ್ಲ ಎಂದರು.

ಲೋಕಾಯುಕ್ತ ಸಂಸ್ಥೆ ಸರ್ಕಾರದ ತಾಳಕ್ಕೆ ಕುಣಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಸುಪ್ರೀಂ ಕೋರ್ಟ್ ತೀರ್ಪು ಏನಿದೆ ಗೊತ್ತಿದೆಯೇ? ಸ್ಥಳೀಯ ಮಟ್ಟದ ಯಾವುದೇ ಸಂಸ್ಥೆಗಳನ್ನು ದುರ್ಬಲಗೊಳಿಸಬಾರದು ಎಂಬ ನಿರ್ದೇಶನವಿದೆ. ಇನ್ನು ಹೈಕೋರ್ಟ್ ಕೂಡ ಲೋಕಾಯುಕ್ತ ಸ್ವಾಯತ್ತ ಸಂಸ್ಥೆ ಎಂದು ಹೇಳಿದೆ. ಅವರವರು ಅವರ ಕೆಲಸ ಮಾಡುತ್ತಿದ್ದಾರೆ. ಯಾರೇ ಸಿಎಂ ಆಗಿರಲಿ, ಬೊಮಾಯಿ ಸಿಎಂ ಆಗಿರಲಿ, ಮುಖ್ಯಮಂತ್ರಿ ಹೇಳಿದಂತೆ ಲೋಕಾಯುಕ್ತ ಪೊಲೀಸರು ಕೇಳುತ್ತಾರಾ? ಎಂದು ಪ್ರಶ್ನಿಸಿದರು.

ಇದರಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವಿಲ್ಲ. ಇಲ್ಲಿ ಯಾವುದೇ ಅಧಿಕಾರಿ ನೇಮಿಸಬೇಕಾದರೂ ಲೋಕಾಯುಕ್ತರ ಅನುಮತಿ ಮೇರೆಗೆ ಕೆಲಸ ಮಾಡಲಾಗುವುದು. ಇಲ್ಲಿ ಕರ್ನಾಟಕದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುವುದೇ ಹೊರತು, ಹೊರ ರಾಜ್ಯದವರನ್ನು ಆಯ್ಕೆ ಮಾಡಲು ಬರುವುದಿಲ್ಲ ಎಂದು ತಿಳಿಸಿದರು.

ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರಿಗೆ ಬೇರೆ ಸಮಯದಲ್ಲಿ ಉತ್ತರ ನೀಡುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

23 mins ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

2 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

3 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

8 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

12 hours ago