ರಾಜ್ಯ

ಮುಡಾ ಪ್ರಕರಣ ರಾಜಕೀಯ ಪ್ರೇರಿತ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತ. ಆಸ್ತಿಗೆ ಪ್ರತಿಯಾಗಿ ಪರಿಹಾರ ಕೇಳಿದ್ದನ್ನು ಅಪರಾಧ ಎಂದು ಬಿಂಬಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಪ್ರಕರಣದಲ್ಲಿ ಬಿಜೆಪಿ ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಿದ್ದು ನಮಗೆ ಗೊತ್ತಿದೆ. ಇದರ ಹಿಂದೆ ಯಾವ ರೀತಿಯ ರಾಜಕೀಯ ಇದೆ ಎಂದು ನಮಗೆಲ್ಲಾ ಅರ್ಥವಾಗಿದೆ ಎಂದರು.

ಲೋಕಾಯುಕ್ತ ತನಿಖೆ ಮುಖ್ಯಮಂತ್ರಿ ಅಥವಾ ಇನ್ಯಾರದೋ ಅಣತಿಯಂತೆ ನಡೆದಿಲ್ಲ. ನ್ಯಾಯಾಲಯದ ಉಸ್ತುವಾರಿಯಲ್ಲಿ ವಿಚಾರಣೆಯಾಗಿದೆ. ಮೇಲಾಗಿ ಲೋಕಾಯುಕ್ತ ಚುನಾವಣಾ ಆಯೋಗದಂತೆ ಸಂಪೂರ್ಣ ಸ್ವಾಯತ್ತ ಸಂಸ್ಥೆ. ಅಲ್ಲಿ ಮುಖ್ಯಮಂತ್ರಿಯವರ ಹಸ್ತಕ್ಷೇಪ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳ್ದೆ? ಇದು ರಾಜಕೀಯ ಪ್ರೇರಿತ ಆರೋಪ. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ ಎಂದರು.

ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಅವರು ಕೊಟ್ಟಿದ್ದಾರೆ. ನಮಗೆ ಇಂತಹುದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು ಎಲ್ಲಿಯೂ ಕೇಳಿಲ್ಲ. ಆದರೂ ಅನಗತ್ಯ ಗೊಂದಲ ಬೇಡ ಎಂದು ಅವರು ಈ ನಿವೇಶನಗಳನ್ನು ವಾಪಸ್ ನೀಡಿದ್ದಾರೆ ಎಂದು ತಿಳಿಸಿದರು.

ಯಾವುದೇ ಪ್ರಕರಣ ದಾಖಲಿಸುವಾಗ ಅದಕ್ಕೆ ಪೂರಕವಾದ ದಾಖಲೆ ಬೇಕು. ಲೋಕಾಯುಕ್ತ ಸಂಸ್ಥೆ ತನ್ನ ಕರ್ತವ್ಯ ಮಾಡಿದೆ. ಬಿಜೆಪಿಯವರು ತಮ ಹೋರಾಟ ಮಾಡಿಕೊಳ್ಳಲಿ. ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಲು ನಮಗೆ ಗೊತ್ತಿಲ್ಲವೇ? ಇದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕುತಂತ್ರ. ಇದು ಹೆಚ್ಚು ದಿನ ನಡೆಯುವುದಿಲ್ಲ ಎಂದರು.

ಲೋಕಾಯುಕ್ತ ಸಂಸ್ಥೆ ಸರ್ಕಾರದ ತಾಳಕ್ಕೆ ಕುಣಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಸುಪ್ರೀಂ ಕೋರ್ಟ್ ತೀರ್ಪು ಏನಿದೆ ಗೊತ್ತಿದೆಯೇ? ಸ್ಥಳೀಯ ಮಟ್ಟದ ಯಾವುದೇ ಸಂಸ್ಥೆಗಳನ್ನು ದುರ್ಬಲಗೊಳಿಸಬಾರದು ಎಂಬ ನಿರ್ದೇಶನವಿದೆ. ಇನ್ನು ಹೈಕೋರ್ಟ್ ಕೂಡ ಲೋಕಾಯುಕ್ತ ಸ್ವಾಯತ್ತ ಸಂಸ್ಥೆ ಎಂದು ಹೇಳಿದೆ. ಅವರವರು ಅವರ ಕೆಲಸ ಮಾಡುತ್ತಿದ್ದಾರೆ. ಯಾರೇ ಸಿಎಂ ಆಗಿರಲಿ, ಬೊಮಾಯಿ ಸಿಎಂ ಆಗಿರಲಿ, ಮುಖ್ಯಮಂತ್ರಿ ಹೇಳಿದಂತೆ ಲೋಕಾಯುಕ್ತ ಪೊಲೀಸರು ಕೇಳುತ್ತಾರಾ? ಎಂದು ಪ್ರಶ್ನಿಸಿದರು.

ಇದರಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವಿಲ್ಲ. ಇಲ್ಲಿ ಯಾವುದೇ ಅಧಿಕಾರಿ ನೇಮಿಸಬೇಕಾದರೂ ಲೋಕಾಯುಕ್ತರ ಅನುಮತಿ ಮೇರೆಗೆ ಕೆಲಸ ಮಾಡಲಾಗುವುದು. ಇಲ್ಲಿ ಕರ್ನಾಟಕದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುವುದೇ ಹೊರತು, ಹೊರ ರಾಜ್ಯದವರನ್ನು ಆಯ್ಕೆ ಮಾಡಲು ಬರುವುದಿಲ್ಲ ಎಂದು ತಿಳಿಸಿದರು.

ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರಿಗೆ ಬೇರೆ ಸಮಯದಲ್ಲಿ ಉತ್ತರ ನೀಡುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

2 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

2 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

2 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

2 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago