ಬೆಂಗಳೂರು: ಹೈಕೋರ್ಟ್ಗೆ ಮುಡಾ ಪ್ರಕರಣ ವಿಚಾರವಾಗಿ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು ವರದಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ.26ರೊಳಗೆ ವರದಿ ಸಲ್ಲಿಕೆ ಮಾಡಲು ಕಾಲಾವಕಾಶ ನೀಡಿತ್ತು. ಈ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಇಂದು(ನ.25) ಬೆಂಗಳೂರಿಗೆ ತೆರಳಿ ವರದಿ ಸಲ್ಲಿಕೆ ಮಾಡಲಿದ್ದಾರೆ.
ಈ ವಿಚಾರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಉದೇಶ್ ಅವರು ಸುಮಾರು 400ಕ್ಕೂ ಅಧಿಕ ಪುಟಗಳ ವರದಿ ಸಲ್ಲಿಕೆ ಮಾಡಲಿದ್ದಾರೆ.
ವರದಿಯಲ್ಲಿ ಎ1 ಆರೋಪಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರ ಸಮಗ್ರ ವಿಚಾರಣೆಯಿದೆ. ಇದರ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿಚಾರಣೆ, ಕೆಸರೆ ಗ್ರಾಮದ ಸರ್ವೆ ನಂ.464ರ 3.16 ಎಕರೆ ಜಮೀನು ಹಾಗೂ ಮುಡಾ ಪ್ರಕರಣದ ನಿವೇಶನಗಳು ಸೇರಿದಂತೆ ಹಿಂದಿನ ಆಯುಕ್ತರ ಹೇಳಿಕೆಗಳನ್ನು ವರದಿ ಮಾಡಲಾಗಿದೆ. ಅಲ್ಲದೇ ಅಧಿಕಾರಿಗಳು ಇಲ್ಲಿಯವರೆಗೂ ನಡೆಸಿರುವ ವಿಚಾರಣೆ ಕುರಿತು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…
ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…