ಬೆಂಗಳೂರು: ಹೈಕೋರ್ಟ್ಗೆ ಮುಡಾ ಪ್ರಕರಣ ವಿಚಾರವಾಗಿ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು ವರದಿ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ.26ರೊಳಗೆ ವರದಿ ಸಲ್ಲಿಕೆ ಮಾಡಲು ಕಾಲಾವಕಾಶ ನೀಡಿತ್ತು. ಈ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಇಂದು(ನ.25) ಬೆಂಗಳೂರಿಗೆ ತೆರಳಿ ವರದಿ ಸಲ್ಲಿಕೆ ಮಾಡಲಿದ್ದಾರೆ.
ಈ ವಿಚಾರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಉದೇಶ್ ಅವರು ಸುಮಾರು 400ಕ್ಕೂ ಅಧಿಕ ಪುಟಗಳ ವರದಿ ಸಲ್ಲಿಕೆ ಮಾಡಲಿದ್ದಾರೆ.
ವರದಿಯಲ್ಲಿ ಎ1 ಆರೋಪಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿ ಪಾರ್ವತಿ ಸಿದ್ದರಾಮಯ್ಯ, ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರ ಸಮಗ್ರ ವಿಚಾರಣೆಯಿದೆ. ಇದರ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿಚಾರಣೆ, ಕೆಸರೆ ಗ್ರಾಮದ ಸರ್ವೆ ನಂ.464ರ 3.16 ಎಕರೆ ಜಮೀನು ಹಾಗೂ ಮುಡಾ ಪ್ರಕರಣದ ನಿವೇಶನಗಳು ಸೇರಿದಂತೆ ಹಿಂದಿನ ಆಯುಕ್ತರ ಹೇಳಿಕೆಗಳನ್ನು ವರದಿ ಮಾಡಲಾಗಿದೆ. ಅಲ್ಲದೇ ಅಧಿಕಾರಿಗಳು ಇಲ್ಲಿಯವರೆಗೂ ನಡೆಸಿರುವ ವಿಚಾರಣೆ ಕುರಿತು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…