ರಾಜ್ಯ

ಮುಡಾ ನಿವೇಶನ ವಾಪಾಸ್‌ ನೀಡಿದ್ದು, ಸ್ವಲ್ಪ ತಡವಾಗಿರಬಹುದು, ಆದರೆ ನಿರ್ಧಾರ ಸರಿ ಇರುತ್ತದೆ: ಪರಮೇಶ್ವರ್‌

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟವಾಗಿರುವ 14 ನಿವೇಶನಗಳನ್ನು ವಾಪಾಸ್‌ ನೀಡಿದ್ದು ಸ್ವಲ್ವ ತಡವಾಗಿರಬಹುದು, ಆದರೆ ಈ ನಿರ್ಧಾರ ಸರಿ ಇರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಇಂದು(ಅಕ್ಟೋಬರ್‌.1) ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾದ 14 ನಿವೇಶನಗಳನ್ನು ವಾಪಾಸ್‌ ಮಾಡಲು ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಕಾನೂನಾತ್ಮಕವಾಗಿ ಮುಂದೇನು ಆಗುತ್ತೆ ಎಂದು ಕಾದು ನೋಡಬೇಕಾಗಿದೆ. ಈ ಮಧ್ಯೆ ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಹಾಗೇ ಹುಡುಕುತ್ತಿದ್ದಾರೆ. ಸಿಎಂ ಪತ್ನಿ ನಿವೇಶನಗಳನ್ನು ವಾಪಾಸ್‌ ನೀಡಿದ್ದು ಸ್ವಲ್ವ ತಡವಾಗಿರಬಹುದು. ಆದರೆ ಒಮೊಮ್ಮೆ ತಡವಾಗಿರುವ ನಿರ್ಧಾರಗಳು ಸರಿಯಾಗಿರುತ್ತವೆ ಎಂದು ಹೇಳಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ನಮ್ಮ ಪಕ್ಷದ 136 ಜನ ಶಾಸಕರೂ ನಿಲ್ಲುತ್ತೇವೆ. ಅಲ್ಲದೇ ಕಾಂಗ್ರೆಸ್‌ ಹೈಕಮಾಂಡ್‌ ಸಹ ಅವರ ಪರ ನಿಲ್ಲುತ್ತದೆ. ಇದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago