ಬೆಂಗಳೂರು: ಮುಡಾ ಪ್ರಕರಣದಲ್ಲಿ ಆರ್ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು(ಅ.28) ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಶಾಂತಿನಗರದ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಚಾರಣೆಗೆ ಹಾಜರಾಗುವಂತೆ ಅಕ್ಟೋಬರ್ 22 ರಂದು ನನಗೆ ನೋಟಿಸ್ ನೀಡಲಾಗಿತ್ತು. ಆದರೆ, ಅಕ್ಟೋಬರ್ 23 ರಂದು ಸಂಜೆ 4 ಗಂಟೆಗೆ ನನಗೆ ನೋಟಿಸ್ ತಲುಪಿದ ಕಾರಣ ನಾನು ಕಾಲಾವಕಾಶ ಕೇಳಿದ್ದೆ. ಹೀಗಾಗಿ ಅಕ್ಟೋಬರ್ 24 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ನಾನು ಇಂದು ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಹೇಳಿದರು.
ಮುಡಾ ಪ್ರಕರಣ: ಎ4 ಆರೋಪಿ ಸಹ ವಿಚಾರಣೆಗೆ ಹಾಜರು
ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ 4 ಜನರ ಮೇಲೆ ಎಫ್ಐಆರ್ ದಾಖಲಿಸಿದೆ. ಈ ಎಫ್ಐಆರ್ನಲ್ಲಿ ಎ4 ಆರೋಪಿಯಾಗಿರುವ ದೇವರಾಜರನ್ನು ಸಹ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದು, ಇಂದು ಗಂಗರಾಜು ನಂತರ ದೇವರಾಜು ಮುಡಾ ಪ್ರಕರಣದ ಬಗ್ಗೆ ವಿಚಾರಣೆ ಎದುರಿಸಲಿದ್ದಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…