ರಾಜ್ಯ

ಮುಡಾ ಪ್ರಕರಣ: ED ವಿಚಾರಣೆಗೆ ಹಾಜರಾದ ಆರ್‌ಟಿಐ ಕಾರ್ಯಕರ್ತ ಗಂಗರಾಜು

ಬೆಂಗಳೂರು: ಮುಡಾ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರನ್ನು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು(ಅ.28) ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಶಾಂತಿನಗರದ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಚಾರಣೆಗೆ ಹಾಜರಾಗುವಂತೆ ಅಕ್ಟೋಬರ್‌ 22 ರಂದು ನನಗೆ ನೋಟಿಸ್‌ ನೀಡಲಾಗಿತ್ತು. ಆದರೆ, ಅಕ್ಟೋಬರ್‌ 23 ರಂದು ಸಂಜೆ 4 ಗಂಟೆಗೆ ನನಗೆ ನೋಟಿಸ್‌ ತಲುಪಿದ ಕಾರಣ ನಾನು ಕಾಲಾವಕಾಶ ಕೇಳಿದ್ದೆ. ಹೀಗಾಗಿ ಅಕ್ಟೋಬರ್‌ 24 ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ನಾನು ಇಂದು ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಹೇಳಿದರು.

ಮುಡಾ ಪ್ರಕರಣ: ಎ4 ಆರೋಪಿ ಸಹ ವಿಚಾರಣೆಗೆ ಹಾಜರು
ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ 4 ಜನರ ಮೇಲೆ ಎಫ್‌ಐಆರ್‌ ದಾಖಲಿಸಿದೆ. ಈ ಎಫ್‌ಐಆರ್‌ನಲ್ಲಿ ಎ4 ಆರೋಪಿಯಾಗಿರುವ ದೇವರಾಜರನ್ನು ಸಹ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದು, ಇಂದು ಗಂಗರಾಜು ನಂತರ ದೇವರಾಜು ಮುಡಾ ಪ್ರಕರಣದ ಬಗ್ಗೆ ವಿಚಾರಣೆ ಎದುರಿಸಲಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

29 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

31 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

33 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

34 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

39 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

44 mins ago