ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದಲ್ಲಿ ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೆ ಸಂಪೂರ್ಣ ದಾಖಲೆ ಸಲ್ಲಿಸಿದ್ದಾರೆ.
ಸಲ್ಲಿಸಿರುವ ದಾಖಲೆಗಳ ಸಂಬಂಧ ಸ್ನೇಹಮಯಿ ಕೃಷ್ಣ ಅವರಿಂದ ಇ.ಡಿ ಸಂಪೂರ್ಣ ದಾಖಲೆ ಪಡೆದುಕೊಂಡಿದ್ದು, ಮುಂದಿನ ವಿಚಾರಣೆ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.
ಮುಡಾ ಪ್ರಕರಣ ಸಂಬಂಧ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಸ್ನೇಹಮಯಿ ಕೃಷ್ಣ ಅವರಿಗೆ ಇ.ಡಿ ಸಮನ್ಸ್ ನೀಡಿತ್ತು. ಅದರಂತೆ ಕೃಷ್ಣ ಅವರು ನಿನ್ನೆ ಬೆಳಿಗ್ಗೆ ಇ-ಮೇಲ್ ಮೂಲಕ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದರು.
ಇದರೊಂದಿಗೆ ಬೆಂಗಳೂರಿನ ಇ.ಡಿ ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪ್ರತಿಗಳನ್ನು ಸಹ ನೀಡಿದ್ದಾರೆ.
ಸಂಪೂರ್ಣ ದಾಖಲೆಗಳನ್ನು ಪರಿಶೀಲನೆ ನಡೆಸಿದ ಇ.ಡಿ, ಸ್ನೇಹಮಯಿ ಕೃಷ್ಣರಿಂದ ಸಂಪೂರ್ಣ ವಿವರಣೆ ಪಡೆದುಕೊಂಡಿದೆ.
ಇನ್ನು ಮುಂದೆ ಅಸಲಿ ಆಟ ಶುರುವಾಗಲಿದೆ ಎನ್ನಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲವೇ ದಿನಗಳಲ್ಲಿ ನೋಟಿಸ್ ನೀಡುವ ಸಾಧ್ಯತೆ ಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…