ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದಲ್ಲಿ ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೆ ಸಂಪೂರ್ಣ ದಾಖಲೆ ಸಲ್ಲಿಸಿದ್ದಾರೆ.
ಸಲ್ಲಿಸಿರುವ ದಾಖಲೆಗಳ ಸಂಬಂಧ ಸ್ನೇಹಮಯಿ ಕೃಷ್ಣ ಅವರಿಂದ ಇ.ಡಿ ಸಂಪೂರ್ಣ ದಾಖಲೆ ಪಡೆದುಕೊಂಡಿದ್ದು, ಮುಂದಿನ ವಿಚಾರಣೆ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.
ಮುಡಾ ಪ್ರಕರಣ ಸಂಬಂಧ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಸ್ನೇಹಮಯಿ ಕೃಷ್ಣ ಅವರಿಗೆ ಇ.ಡಿ ಸಮನ್ಸ್ ನೀಡಿತ್ತು. ಅದರಂತೆ ಕೃಷ್ಣ ಅವರು ನಿನ್ನೆ ಬೆಳಿಗ್ಗೆ ಇ-ಮೇಲ್ ಮೂಲಕ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದರು.
ಇದರೊಂದಿಗೆ ಬೆಂಗಳೂರಿನ ಇ.ಡಿ ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪ್ರತಿಗಳನ್ನು ಸಹ ನೀಡಿದ್ದಾರೆ.
ಸಂಪೂರ್ಣ ದಾಖಲೆಗಳನ್ನು ಪರಿಶೀಲನೆ ನಡೆಸಿದ ಇ.ಡಿ, ಸ್ನೇಹಮಯಿ ಕೃಷ್ಣರಿಂದ ಸಂಪೂರ್ಣ ವಿವರಣೆ ಪಡೆದುಕೊಂಡಿದೆ.
ಇನ್ನು ಮುಂದೆ ಅಸಲಿ ಆಟ ಶುರುವಾಗಲಿದೆ ಎನ್ನಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲವೇ ದಿನಗಳಲ್ಲಿ ನೋಟಿಸ್ ನೀಡುವ ಸಾಧ್ಯತೆ ಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…