ರಾಜ್ಯ

ಮುಡಾ ಪ್ರಕರಣ: ಸಿಎಂ ಪತ್ನಿ, ಭೈರತಿ ಸುರೇಶ್‌ಗೆ ಕೊಂಚ ರಿಲೀಫ್‌

ಧಾರವಾಡ:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್​ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ನ್ಯಾ. ನಾಗಪ್ರಸನ್ನ ಅವರು 10 ದಿನಗಳ ಕಾಲ ಸಿಎಂ ಪತ್ನಿ ಮತ್ತು ಬೈರತಿ ಸುರೇಶ್‌ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶ ಪ್ರಕಟಿಸಿದರು.

ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮುಂದುವರಿದಿದೆ. ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಅವರು​ ಇಡಿ ಸಮನ್ಸ್ ಪ್ರಶ್ನಿಸಿ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಫೆಬ್ರವರಿ 10ರ ವರೆಗೆ ಇಡಿ ನೀಡಿದ್ದ ಸಮನ್ಸ್‌ಗೆ ತಡೆ ನೀಡಿದ್ದರು. ಇದೀಗ ಮತ್ತೆ ಫೆಬ್ರವರಿ 20 ರವರೆಗೆ ತಡೆಯಾಜ್ಞೆಯನ್ನು ವಿಸ್ತರಿಸಲಾಗಿದೆ.

ಮೊದಲು ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿವಿ ನಾಗೇಶ್, ಬೈರತಿ ಸುರೇಶ್ 2023ರ ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಇಡಿ ಪ್ರಶ್ನಾವಳಿಯಲ್ಲಿ ಅಪ್ಪ, ತಾತ, ಮಕ್ಕಳು, ಮೊಮ್ಮಕ್ಕಳ ಮಾಹಿತಿ ಎಲ್ಲಾ ನೀಡಿ ಎಂದು ಸಮನ್ಸ್ ಮಾಡಿದೆ. ಎಲ್ಲರ ಮಾಹಿತಿಯನ್ನು ಬ್ಯಾಂಕ್ ಡಿಟೈಲ್ಸ್ ಕೊಡಬೇಕೆಂದು ಇಡಿ ಕೇಳುತ್ತಿದೆ. ಸುರೇಶ್ ಗೂ ಈ ಪ್ರಕರಣ ಯಾವುದೇ ಸಂಬಂಧ ಇಲ್ಲ. ಪ್ರಕರಣದಲ್ಲಿ ಅವರು ಆರೋಪಿಯೂ ಅಲ್ಲ, ಆದರೂ ಕೂಡ ಇಡಿ ಸಮನ್ಸ್ ನೀಡಿದೆ.. ಹೀಗಾಗಿ ಕೋರ್ಟ್ ಗೆ ಬಂದಿದ್ದೇವೆ ಎಂದು ವಾದ ಮಂಡಿಸಿದರು.

ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರು, ಇಡಿ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ನ ಇತ್ತೀಚಿನ ತೀರ್ಪು ಇದೆ ಎಂದರು.

ಪ್ರಕರಣದಲ್ಲಿ ಸೈಟ್‌ಗಳನ್ನು ವಾಪಸ್ ಮಾಡಲಾಗಿದೆ.ಅಕ್ರಮ ಹಣ ವಗಾರ್ವಣೆ ಪ್ರಶ್ನೆಯೇ ಬರುವುದಿಲ್ಲ. ಅಕ್ರಮ ಹಣದ ಗಳಿಕೆಯಿದ್ದರೆ ಮಾತ್ರ ಇಡಿಗೆ ಅಧಿಕಾರವಿದೆ. ಆಗ ಮಾತ್ರ ಇಡಿ ಸರ್ಚ್ ಮತ್ತು ಸೀಜ್ ಮಾಡಬಹುದು. ಆದರೆ ನಟೇಶ್ ಪ್ರಕರಣದಲ್ಲಿ ಇಡಿಯ ದಾಳಿ ಮತ್ತು ಸೀಜ್ ರದ್ದುಪಡಿಸಿದೆ. ಇಡಿ ಕಾನೂನು ಉಲ್ಲಂಘಿಸಿದೆ ಎಂದು ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದೆ ಎಂದು ವಾದ ಮಂಡಿಸಿದರು.

ಸಿಎಂ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಇಡಿ ಮೇಜರ್ ಟ್ವಿಸ್ಟ್ ನೀಡಿತ್ತು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿತ್ತು. ಇಡಿ ಬೆಂಗಳೂರು ವಲಯ ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕೃಷ್ಣನ್ ಅವರು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಮಾಡಿದ್ದರು. ಇಡಿ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಧ್ಯಾಯ ಎರಡು ಇಲ್ಲಿಂದು ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

1 hour ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

1 hour ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

1 hour ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

1 hour ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

12 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

12 hours ago