ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರು 10 ದಿನಗಳ ಕಾಲ ಸಿಎಂ ಪತ್ನಿ ಮತ್ತು ಬೈರತಿ ಸುರೇಶ್ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶ ಪ್ರಕಟಿಸಿದರು.
ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮುಂದುವರಿದಿದೆ. ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಅವರು ಇಡಿ ಸಮನ್ಸ್ ಪ್ರಶ್ನಿಸಿ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಫೆಬ್ರವರಿ 10ರ ವರೆಗೆ ಇಡಿ ನೀಡಿದ್ದ ಸಮನ್ಸ್ಗೆ ತಡೆ ನೀಡಿದ್ದರು. ಇದೀಗ ಮತ್ತೆ ಫೆಬ್ರವರಿ 20 ರವರೆಗೆ ತಡೆಯಾಜ್ಞೆಯನ್ನು ವಿಸ್ತರಿಸಲಾಗಿದೆ.
ಮೊದಲು ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿವಿ ನಾಗೇಶ್, ಬೈರತಿ ಸುರೇಶ್ 2023ರ ಜೂನ್ನಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಇಡಿ ಪ್ರಶ್ನಾವಳಿಯಲ್ಲಿ ಅಪ್ಪ, ತಾತ, ಮಕ್ಕಳು, ಮೊಮ್ಮಕ್ಕಳ ಮಾಹಿತಿ ಎಲ್ಲಾ ನೀಡಿ ಎಂದು ಸಮನ್ಸ್ ಮಾಡಿದೆ. ಎಲ್ಲರ ಮಾಹಿತಿಯನ್ನು ಬ್ಯಾಂಕ್ ಡಿಟೈಲ್ಸ್ ಕೊಡಬೇಕೆಂದು ಇಡಿ ಕೇಳುತ್ತಿದೆ. ಸುರೇಶ್ ಗೂ ಈ ಪ್ರಕರಣ ಯಾವುದೇ ಸಂಬಂಧ ಇಲ್ಲ. ಪ್ರಕರಣದಲ್ಲಿ ಅವರು ಆರೋಪಿಯೂ ಅಲ್ಲ, ಆದರೂ ಕೂಡ ಇಡಿ ಸಮನ್ಸ್ ನೀಡಿದೆ.. ಹೀಗಾಗಿ ಕೋರ್ಟ್ ಗೆ ಬಂದಿದ್ದೇವೆ ಎಂದು ವಾದ ಮಂಡಿಸಿದರು.
ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ಅವರು, ಇಡಿ ಸಮನ್ಸ್ ಜಾರಿಗೊಳಿಸಿದಾಗ ಹೈಕೋರ್ಟ್ ಮಧ್ಯಪ್ರವೇಶ ಮಾಡಬಾರದು. ಈ ಬಗ್ಗೆ ಸುಪ್ರೀಂಕೋರ್ಟ್ ನ ಇತ್ತೀಚಿನ ತೀರ್ಪು ಇದೆ ಎಂದರು.
ಪ್ರಕರಣದಲ್ಲಿ ಸೈಟ್ಗಳನ್ನು ವಾಪಸ್ ಮಾಡಲಾಗಿದೆ.ಅಕ್ರಮ ಹಣ ವಗಾರ್ವಣೆ ಪ್ರಶ್ನೆಯೇ ಬರುವುದಿಲ್ಲ. ಅಕ್ರಮ ಹಣದ ಗಳಿಕೆಯಿದ್ದರೆ ಮಾತ್ರ ಇಡಿಗೆ ಅಧಿಕಾರವಿದೆ. ಆಗ ಮಾತ್ರ ಇಡಿ ಸರ್ಚ್ ಮತ್ತು ಸೀಜ್ ಮಾಡಬಹುದು. ಆದರೆ ನಟೇಶ್ ಪ್ರಕರಣದಲ್ಲಿ ಇಡಿಯ ದಾಳಿ ಮತ್ತು ಸೀಜ್ ರದ್ದುಪಡಿಸಿದೆ. ಇಡಿ ಕಾನೂನು ಉಲ್ಲಂಘಿಸಿದೆ ಎಂದು ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದೆ ಎಂದು ವಾದ ಮಂಡಿಸಿದರು.
ಸಿಎಂ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಇಡಿ ಮೇಜರ್ ಟ್ವಿಸ್ಟ್ ನೀಡಿತ್ತು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿತ್ತು. ಇಡಿ ಬೆಂಗಳೂರು ವಲಯ ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕೃಷ್ಣನ್ ಅವರು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಮಾಡಿದ್ದರು. ಇಡಿ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…