ರಾಜ್ಯ

ಮುಡಾ ಕೇಸ್‌ ಬಗ್ಗೆ ಸುಪ್ರೀಂಕೋರ್ಟ್‌ ತೀರ್ಪು: ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಮೈಸೂರು ಮುಡಾ ಹಗರಣದ ಬಗ್ಗೆ ಸುಪ್ರೀಂಕೋರ್ಟ್‌ ತೀರ್ಪು ಹೊರಡಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದು ಟ್ವೀಟ್‌ ಮಾಡಿ ಸಂಭ್ರಮಿಸಿದ್ದಾರೆ.

ಮೈಸೂರು ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇಡಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರಕ್ಕೆ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ.

ಸುಪ್ರೀಂಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.‌ಗವಾಯಿ ಮತ್ತು ಕೆ.ವಿ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತವಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂಕೋರ್ಟ್‌ ಆದೇಶ ಉಳಿಸಿಕೊಂಡು ಕಾಪಾಡಿದೆ.

ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಹಾಗೂ ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದದ್ದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ.

ಸುಪ್ರೀಂಕೋರ್ಟ್‌ ಈ ಕಣ್ಣು ತೆರೆಸುವ ಆದೇಶದ ನಂತರವಾದರೂ ಕೂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಹಾಗೂ ಇಡಿಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

29 mins ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

33 mins ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

35 mins ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

36 mins ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

38 mins ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

40 mins ago