MUDA case surpeme court verdict : CM Siddaramaiah reacts
ಬೆಂಗಳೂರು: ಮೈಸೂರು ಮುಡಾ ಹಗರಣದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಹೊರಡಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದು ಟ್ವೀಟ್ ಮಾಡಿ ಸಂಭ್ರಮಿಸಿದ್ದಾರೆ.
ಮೈಸೂರು ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇಡಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರಕ್ಕೆ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ.
ಸುಪ್ರೀಂಕೋರ್ಟ್ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತವಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ.
ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಹಾಗೂ ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದದ್ದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ.
ಸುಪ್ರೀಂಕೋರ್ಟ್ ಈ ಕಣ್ಣು ತೆರೆಸುವ ಆದೇಶದ ನಂತರವಾದರೂ ಕೂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಹಾಗೂ ಇಡಿಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…