ರಾಜ್ಯ

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ 15ಕ್ಕೆ ಮುಂದೂಡಿದೆ.

ಲೋಕಾಯುಕ್ತ ಹಾಗೂ ಇನ್ನಿತರ ಸಂಸ್ಥೆಗಳು ಈ ಪ್ರಕರಣವನ್ನು ಸರಿಯಾದ ದಾರಿಯಲ್ಲಿ ತನಿಖೆ ನಡೆಸುವುದಿಲ್ಲ. ಆದ್ದರಿಂದ ಸಿಬಿಐಗೆ ವಹಿಸಿ ವಿಚಾರಣೆ ನಡೆಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು.

ಇಂದು (ಡಿ.19) ಹೈಕೋರ್ಟ್‌ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, 2025 ಜನವರಿ 15ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.

ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಜಿ ರಾಘವನ್‌, ವಿಚಾರಣೆ ಆರಂಭವಾದ ನಂತರ ಎಲ್ಲಾ ಪ್ರತಿವಾದಿಗಳಿಗೂ ನೋಟಿಸ್‌ ಜಾರಿಯಾಗಿದೆ ಎಂದರು. ಇದೇ ವೇಳೆ ಕೋರ್ಟ್‌ ಎದುರಿನ ಬಿಲ್ಡಿಂಗ್‌ಗೆ ನೋಟಿಸ್‌ ಜಾರಿಮಾಡಲು 35 ದಿನ ಸಮಯ ತಗುಲಿರುವುದು ಶಾಕಿಂಗ್‌ ವಿಷಯ ಎಂದು ಪೀಠ ಅಭಿಪ್ರಾಯಪಟ್ಟಿತು.

ಡಿಸೆಂಬರ್‌ 24 ರೊಳಗೆ ಲೋಕಾಯುಕ್ತ ಪೊಲೀಸರು ವರದಿ ನೀಡಬೇಕಿತ್ತು. ಈಗ ವಿಚಾರಣೆಯನ್ನು ಜನವರಿ 15 ಕ್ಕೆ ಮುಂದೂಡಿರುವುದರಿಂದ ವರದಿ ನೀಡುವ ಅವಧಿಯನ್ನು ಜನವರಿ 28ಕ್ಕೆ ವಿಸ್ತರಣೆ ಮಾಡಿದೆ. ಅಲ್ಲದೇ ಲೋಕಾಯುಕ್ತ ಪೊಲೀಸರ ತನಿಖೆಗೆ ಯಾವುದೇ ಅಡಚಣೆ ಇಲ್ಲ ಎಂದು ನ್ಯಾಯಪೀಠ ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

4 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

4 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

5 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

5 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

5 hours ago