ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ 15ಕ್ಕೆ ಮುಂದೂಡಿದೆ.
ಲೋಕಾಯುಕ್ತ ಹಾಗೂ ಇನ್ನಿತರ ಸಂಸ್ಥೆಗಳು ಈ ಪ್ರಕರಣವನ್ನು ಸರಿಯಾದ ದಾರಿಯಲ್ಲಿ ತನಿಖೆ ನಡೆಸುವುದಿಲ್ಲ. ಆದ್ದರಿಂದ ಸಿಬಿಐಗೆ ವಹಿಸಿ ವಿಚಾರಣೆ ನಡೆಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು.
ಇಂದು (ಡಿ.19) ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, 2025 ಜನವರಿ 15ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ.
ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಜಿ ರಾಘವನ್, ವಿಚಾರಣೆ ಆರಂಭವಾದ ನಂತರ ಎಲ್ಲಾ ಪ್ರತಿವಾದಿಗಳಿಗೂ ನೋಟಿಸ್ ಜಾರಿಯಾಗಿದೆ ಎಂದರು. ಇದೇ ವೇಳೆ ಕೋರ್ಟ್ ಎದುರಿನ ಬಿಲ್ಡಿಂಗ್ಗೆ ನೋಟಿಸ್ ಜಾರಿಮಾಡಲು 35 ದಿನ ಸಮಯ ತಗುಲಿರುವುದು ಶಾಕಿಂಗ್ ವಿಷಯ ಎಂದು ಪೀಠ ಅಭಿಪ್ರಾಯಪಟ್ಟಿತು.
ಡಿಸೆಂಬರ್ 24 ರೊಳಗೆ ಲೋಕಾಯುಕ್ತ ಪೊಲೀಸರು ವರದಿ ನೀಡಬೇಕಿತ್ತು. ಈಗ ವಿಚಾರಣೆಯನ್ನು ಜನವರಿ 15 ಕ್ಕೆ ಮುಂದೂಡಿರುವುದರಿಂದ ವರದಿ ನೀಡುವ ಅವಧಿಯನ್ನು ಜನವರಿ 28ಕ್ಕೆ ವಿಸ್ತರಣೆ ಮಾಡಿದೆ. ಅಲ್ಲದೇ ಲೋಕಾಯುಕ್ತ ಪೊಲೀಸರ ತನಿಖೆಗೆ ಯಾವುದೇ ಅಡಚಣೆ ಇಲ್ಲ ಎಂದು ನ್ಯಾಯಪೀಠ ಹೇಳಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…