Mysore
27
scattered clouds

Social Media

ಗುರುವಾರ, 08 ಜನವರಿ 2026
Light
Dark

ಮುಡಾ ಪ್ರಕರಣ: ಇಂದು ಸಿಬಿಐ ತನಿಖೆಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಾಧ್ಯತೆ?

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರ ವಿರುದ್ಧ ಮೈಸೂರಿನ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಇದೀಗ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣವನ್ನು ಸಿಬಿಐ  ತನಿಖೆಗೆ ವಹಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿರುವ ಸಾಧ್ಯತೆ ಇದೆ.

ಕೆಲವು ದಿನಗಳ ಹಿಂದೆ ದೂರುದಾರ ಸ್ನೇಹಮಯಿ ಕೃಷ್ಣ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಬಳಿಕ, ಎಫ್‌ಆರ್‌ಐ ದಾಖಲಾದ ನಂತರ ಮೈಸೂರು ಲೋಕಾಯುಕ್ತದ ಅಧಿಕಾರಿಗಳು ಪಾರದರ್ಶಕ, ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕವಾಗಿ ತನಿಖೆ ನಡೆಸುವುದಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಯಾಗಬೇಕು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಹೀಗಾಗಿ, ಇಂದು ಹೈಕೋರ್ಟ್‌ ಅರ್ಜಿ ವಿಚಾರಣೆಗೆ ಎತ್ತಿಕೊಳ್ಳುವ ಸಾಧ್ಯತೆ ಇದೆ. ಕೋರ್ಟ್‌ ಸಿಬಿಐ ತನಿಖೆಗೆ ಅನುಮತಿ ನೀಡುತ್ತದೆಯೋ ಅಥವಾ ಇಲ್ಲವೋ ಎಂಬುದನ್ನು ಇನ್ನಷ್ಟೆ ಕಾದು ನೋಡಬೇಕಾಗಿದೆ.

Tags:
error: Content is protected !!