ರಾಜ್ಯ

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಅಕ್ರಮದ ತನಿಖೆ ನಡೆದು ಸರ್ಕಾರದ ಖಾಲಿ ಖಜಾನೆಗೆ ಹಣ ಮರಳಿ ಬಂದರೆ ಒಳ್ಳೆಯದೇ ಅಲ್ಲವೇ?

ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‌ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ಇಡಿಗೆ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದರು.

ಇದನ್ನು ರಾಜಕೀಯವಾಗಿ ನೋಡಬಾರದು. ನಿವೇಶನಗಳು ವಾಪಸ್‌ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಲಾಭವಾಗುತ್ತದೆ. ಸರ್ಕಾರದಲ್ಲಿ ಖಜಾನೆ ಖಾಲಿಯಾಗಿ ಸಂಬಳ ಕೊಡಲಾಗದ ಪರಿಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ ಖಜಾನೆಗೆ ಹಣ ಬಂದರೆ ಒಳ್ಳೆಯದು. ಇದನ್ನು ಕಾಂಗ್ರೆಸ್‌ನವರು ಸ್ವಾಗತಿಸಬೇಕು. ಇದನ್ನು ರಾಜಕಾರಣ ಎನ್ನಲು ಬಿಜೆಪಿ ನಾಯಕರೇನೂ ದೂರು ನೀಡಿಲ್ಲ ಎಂದರು.

ಅಕ್ರಮ ಹಣ ವರ್ಗಾವಣೆಯಾಗಿಲ್ಲ ಎಂದಾದರೆ 3-4 ಸಾವಿರ ಕೋಟಿ ರೂ. ಹಣದ ಅಕ್ರಮ ನಡೆದಿರುವುದು ಹೇಗೆ? ನಿವೇಶನ ಮಂಜೂರಾಗಿದೆ ಎಂದಮೇಲೆ ಅದರ ಹಣ ಯಾರಿಗಾದರೂ ಸಿಕ್ಕೇ ಸಿಕ್ಕಿರುತ್ತದೆ. ಅದಕ್ಕೆ ನಗದಿನಲ್ಲಿ ಹಣ ನೀಡಲಾಗಿರುತ್ತದೆ. ಅಂತಹ ನಗದು ಕಪ್ಪು ಹಣವೇ ಆಗಿರುತ್ತದೆ. ಇಡಿ ಬಗ್ಗೆ ಪ್ರಶ್ನೆ ಮಾಡುವವರು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದಿತ್ತು. ಆದರೆ ಸಿಎಂ ಸಿದ್ದರಾಮಯ್ಯನವರು ಕೋರ್ಟ್‌ಗೆ ಹೋಗಲೇ ಇಲ್ಲ. ಇಡಿಗೆ ಅಧಿಕಾರ ಇಲ್ಲವೆಂದಾದರೆ ಎಸ್‌ಐಟಿ ಮಾಡಲು ಸರ್ಕಾರಕ್ಕೆ ಅಧಿಕಾರವಿದೆಯೇ ಎಂದು ಪ್ರಶ್ನಿಸಬೇಕಾಗುತ್ತದೆ ಎಂದರು.

ಮುಂದಿನ ಹೋರಾಟದ ಕುರಿತು ಪಕ್ಷದ ಮಟ್ಟದಲ್ಲಿ ಚರ್ಚಿಸಲಾಗುವುದು. ಇಡಿ ದಾಳಿಯ ನಂತರ ದಾಖಲೆಗಳು ಸಿಕ್ಕ ಬಳಿ ಪರಿಶೀಲಿಸಿ ಹೋರಾಟ ಮಾಡಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

2 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

2 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

2 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

2 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

4 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

5 hours ago