ರಾಜ್ಯ

ಮುಡಾ : ಸಿಎಂ ಮೇಲ್ಮನವಿ ಅರ್ಜಿ ವಿಚಾರಣೆ ಮೂಂದೂಡಿದ ಹೈಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಅಕ್ರಮವಾಗಿ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಬಂಧವಿಲ್ಲದಿದ್ದರೂ ಪ್ರಕರಣದಲ್ಲಿ ತಮ್ಮನ್ನು ಎಳೆದು ತರಲಾಗಿದೆ ಎಂದು ಆಕ್ಷೇಪಿಸಿ ವಿವಾದಿತ ಜಮೀನಿನ ಮಾಲೀಕ ಜೆ.ದೇವರಾಜು ಸಲ್ಲಿಸಿರುವ ಪ್ರತ್ಯೇಕ ಮೇಲ್ಮನವಿಗಳ ಕುರಿತು ನ್ಯಾ.ಅನು ಶಿವರಾಮನ್ ಹಾಗೂ ನ್ಯಾ.ಕೆ.ರಾಜೇಶ್‌ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರು, ಮೇಲ್ಮನವಿಗಳ ಅಂತಿಮ ವಿಚಾರಣೆ ನಡೆಸಬೇಕಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆಗ ನ್ಯಾಯಪೀಠ, ಈ ಮೇಲ್ಮನವಿಗಳ ವಿಚಾರಣೆಯಂದು ಬೇರೆ ಅರ್ಜಿಗಳನ್ನು ಹೆಚ್ಚಾಗಿ ಪಟ್ಟಿ ಮಾಡುವುದಿಲ್ಲ. ಆದ್ದರಿಂದ, ನವೆಂಬರ್‌ ಮೊದಲ ವಾರದಲ್ಲಿ ಅರ್ಜಿ ವಿಚಾರಣೆ ನಡೆಸಬಹುದೇ ಎಂದು ಕೇಳಿತು. ಇದಕ್ಕೆ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು ನವೆಂಬರ್‌ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಗುರುವಾರ ವಿಚಾರಣೆಗೆ ನಿಗದಿಯಾಗಿದ್ದ ಮೇಲ್ಮನವಿಗಳ ವಿಚಾರಣೆಯನ್ನು ನವೆಂಬರ್‌ ಎರಡನೇ ವಾರಕ್ಕೆ ಮುಂದೂಡಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಮೇಲ್ಮನವಿಗಳನ್ನು ಅಂತಿಮವಾಗಿ ವಿಚಾರಣೆ ನಡೆಸಬೇಕಿದೆ ಎಂದರು.

ಇದಕ್ಕೆ ಮುಡಾ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು ನವೆಂಬರ್ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಂದು ವಿಚಾರಣೆಗೆ ಪಟ್ಟಿಯಾಗಿದ್ದ ಸಿದ್ದರಾಮಯ್ಯ ಸಲ್ಲಿಸಿರುವ ಒಂದು ಮತ್ತು ಜೆ ದೇವರಾಜು ಸಲ್ಲಿಸಿರುವ ಎರಡು ಮೇಲ್ಮನವಿಗಳು ವಿಚಾರಣೆಯನ್ನು ಮುಂದೂಡಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago