Public inconvenience will not be tolerated: High Court warns transport employees
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಅಕ್ರಮವಾಗಿ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಬಂಧವಿಲ್ಲದಿದ್ದರೂ ಪ್ರಕರಣದಲ್ಲಿ ತಮ್ಮನ್ನು ಎಳೆದು ತರಲಾಗಿದೆ ಎಂದು ಆಕ್ಷೇಪಿಸಿ ವಿವಾದಿತ ಜಮೀನಿನ ಮಾಲೀಕ ಜೆ.ದೇವರಾಜು ಸಲ್ಲಿಸಿರುವ ಪ್ರತ್ಯೇಕ ಮೇಲ್ಮನವಿಗಳ ಕುರಿತು ನ್ಯಾ.ಅನು ಶಿವರಾಮನ್ ಹಾಗೂ ನ್ಯಾ.ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ಮೇಲ್ಮನವಿಗಳ ಅಂತಿಮ ವಿಚಾರಣೆ ನಡೆಸಬೇಕಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆಗ ನ್ಯಾಯಪೀಠ, ಈ ಮೇಲ್ಮನವಿಗಳ ವಿಚಾರಣೆಯಂದು ಬೇರೆ ಅರ್ಜಿಗಳನ್ನು ಹೆಚ್ಚಾಗಿ ಪಟ್ಟಿ ಮಾಡುವುದಿಲ್ಲ. ಆದ್ದರಿಂದ, ನವೆಂಬರ್ ಮೊದಲ ವಾರದಲ್ಲಿ ಅರ್ಜಿ ವಿಚಾರಣೆ ನಡೆಸಬಹುದೇ ಎಂದು ಕೇಳಿತು. ಇದಕ್ಕೆ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ನವೆಂಬರ್ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಗುರುವಾರ ವಿಚಾರಣೆಗೆ ನಿಗದಿಯಾಗಿದ್ದ ಮೇಲ್ಮನವಿಗಳ ವಿಚಾರಣೆಯನ್ನು ನವೆಂಬರ್ ಎರಡನೇ ವಾರಕ್ಕೆ ಮುಂದೂಡಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಮೇಲ್ಮನವಿಗಳನ್ನು ಅಂತಿಮವಾಗಿ ವಿಚಾರಣೆ ನಡೆಸಬೇಕಿದೆ ಎಂದರು.
ಇದಕ್ಕೆ ಮುಡಾ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು ನವೆಂಬರ್ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಂದು ವಿಚಾರಣೆಗೆ ಪಟ್ಟಿಯಾಗಿದ್ದ ಸಿದ್ದರಾಮಯ್ಯ ಸಲ್ಲಿಸಿರುವ ಒಂದು ಮತ್ತು ಜೆ ದೇವರಾಜು ಸಲ್ಲಿಸಿರುವ ಎರಡು ಮೇಲ್ಮನವಿಗಳು ವಿಚಾರಣೆಯನ್ನು ಮುಂದೂಡಿತು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…