ರಾಜ್ಯ

ಮುಡಾ : ಸಿಎಂ ಮೇಲ್ಮನವಿ ಅರ್ಜಿ ವಿಚಾರಣೆ ಮೂಂದೂಡಿದ ಹೈಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಅಕ್ರಮವಾಗಿ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಬಂಧವಿಲ್ಲದಿದ್ದರೂ ಪ್ರಕರಣದಲ್ಲಿ ತಮ್ಮನ್ನು ಎಳೆದು ತರಲಾಗಿದೆ ಎಂದು ಆಕ್ಷೇಪಿಸಿ ವಿವಾದಿತ ಜಮೀನಿನ ಮಾಲೀಕ ಜೆ.ದೇವರಾಜು ಸಲ್ಲಿಸಿರುವ ಪ್ರತ್ಯೇಕ ಮೇಲ್ಮನವಿಗಳ ಕುರಿತು ನ್ಯಾ.ಅನು ಶಿವರಾಮನ್ ಹಾಗೂ ನ್ಯಾ.ಕೆ.ರಾಜೇಶ್‌ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರು, ಮೇಲ್ಮನವಿಗಳ ಅಂತಿಮ ವಿಚಾರಣೆ ನಡೆಸಬೇಕಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಆಗ ನ್ಯಾಯಪೀಠ, ಈ ಮೇಲ್ಮನವಿಗಳ ವಿಚಾರಣೆಯಂದು ಬೇರೆ ಅರ್ಜಿಗಳನ್ನು ಹೆಚ್ಚಾಗಿ ಪಟ್ಟಿ ಮಾಡುವುದಿಲ್ಲ. ಆದ್ದರಿಂದ, ನವೆಂಬರ್‌ ಮೊದಲ ವಾರದಲ್ಲಿ ಅರ್ಜಿ ವಿಚಾರಣೆ ನಡೆಸಬಹುದೇ ಎಂದು ಕೇಳಿತು. ಇದಕ್ಕೆ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು ನವೆಂಬರ್‌ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಗುರುವಾರ ವಿಚಾರಣೆಗೆ ನಿಗದಿಯಾಗಿದ್ದ ಮೇಲ್ಮನವಿಗಳ ವಿಚಾರಣೆಯನ್ನು ನವೆಂಬರ್‌ ಎರಡನೇ ವಾರಕ್ಕೆ ಮುಂದೂಡಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಮೇಲ್ಮನವಿಗಳನ್ನು ಅಂತಿಮವಾಗಿ ವಿಚಾರಣೆ ನಡೆಸಬೇಕಿದೆ ಎಂದರು.

ಇದಕ್ಕೆ ಮುಡಾ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು ನವೆಂಬರ್ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಂದು ವಿಚಾರಣೆಗೆ ಪಟ್ಟಿಯಾಗಿದ್ದ ಸಿದ್ದರಾಮಯ್ಯ ಸಲ್ಲಿಸಿರುವ ಒಂದು ಮತ್ತು ಜೆ ದೇವರಾಜು ಸಲ್ಲಿಸಿರುವ ಎರಡು ಮೇಲ್ಮನವಿಗಳು ವಿಚಾರಣೆಯನ್ನು ಮುಂದೂಡಿತು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

26 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago