ರಾಜ್ಯ

ಮೂಡಾ ಹಗರಣ| ಬಿಜೆಪಿಯಿಂದ ಅಹೋರಾತ್ರಿ ಧರಣಿ: ಸದನದಲ್ಲಿ ಹನುಮಾನ್‌ ಚಾಲೀಸ ಪಠಣ, ಶಾಸಕರಿಂದ ರಾಮ ಭಜನೆ

ಬೆಂಗಳೂರು: ಮೂಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಮೂಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಸದನದಲ್ಲಿ ಹನುಮಾನ್‌ ಚಾಲೀಸ್‌ ಪಠಣ ಮಾಡುವ ಮೂಲಕ ಬಿಜೆಪಿ ಸದಸ್ಯರು ಗಮನ ಸೆಳೆದಿದ್ದಾರೆ. ಬಿಜೆಪಿ ಶಾಸಕರಾದ ಭಾಗೀರಥಿ ಮುರಳ್ಯ ಹಾಗೂ ವೇದವ್ಯಾಸ ಕಾಮತ್‌ ಸದನದಲ್ಲಿ ಧರಣಿವೇಳೆ ಹನುಮಾನ್‌ ಚಾಲೀಸ್‌ ಪಠಣ ಮಾಡಿದರು. ಈ ವೇಳೆ ಇತರ ಸದಸ್ಯರು ಸಾಥ್‌ ನೀಡಿದರು.

ಇನ್ನೂ ಈ ವೇಳೆ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಆರ್‌ಎಸ್‌ಎಸ್‌ ಶಾಖೆಯ ಪ್ರಾರ್ಥನೆ ಮಾಡಲು ಮುಂದಾದರು. ಇದಕ್ಕೆ ವಿರೋಧ ಪಕ್ಷದ ನಾಯಕ ಬೇಡ ಎಂದು ಸೂಚಿಸಿದರು. ಹೀಗಾಗಿ ಪೂಂಜಾ ಸುಮ್ಮನಾದರು.

ಸರ್ಕಾರದ ಊಟ, ಹಾಸಿಗೆ ನಿರಾಕರಿಸಿದ ವಿಪಕ್ಷಗಳು
ಧರಣಿ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿ ಕಾರ್ಯದರ್ಶಿ ವಿಶಾಲಾಕ್ಷಿ ಶಾಸಕರಿಗೆ ರಾತ್ರಿ ಊಟದ ಬಗ್ಗೆ ವಿಚಾರಿಸಿದರು. ಈ ವೇಳೆ ಶಾಸಕರು ಹಗರಣದ ಹಣದ ಊಟದ ವ್ಯವಸ್ಥೆ ನಮಗೆ ಬೇಡ ಎಂದರು. ಜೊತೆಗೆ ರಾತ್ರಿಯ ಊಟ ಹಾಗೂ ಹಾಸಿಗೆ ವ್ಯವಸ್ಥೆಯನ್ನು ತಾವೇ ಮಾಡಿಕೊಳ್ಳುವುದಾಗಿ ತಿಳಿಸಿದರು. ಬಳಿಕ ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಅವರಿಗೆ ಸದಸ್ಯರಿಗೆ ಊಟ ಹಾಗೂ ಹಾಸಿಗೆ ವ್ಯವಸ್ಥೆ ಮಾಡುವ ಹೊಣೆ ನೀಡಿದರು.

ಏನಕ್ಕೆ ಧರಣಿ?
ಮೂಡಾ ಹಗರಣ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಜೆಪಿಯ ಸದಸ್ಯರು ಸದನದಲ್ಲಿ ಕೇಳಿದರು. ಈ ವೇಳೆ ಬಿಜೆಪಿಯ ನಿಲುವಳಿಯನ್ನು ಸ್ಪೀಕರ್‌ ಯು.ಟಿ ಖಾದರ್‌ ತಿರಸ್ಕರಿಸಿದರು. ಇದರಿಂದ ಮಾತಿನ ಚಕಮಕಿ, ಗದ್ದಲ, ಆರೋಪ-ಪ್ರತ್ಯರೋಪ ನಡೆದು ಪ್ರತಿಪಕ್ಷಗಳು ಸದನದ ಬಾವಿಗಿಳಿದು ಧರಣಿ ನಡೆಸಿತ್ತು. ಬಳಿಕ ಅಹೋರಾತ್ರಿ ಧರಣಿ ಘೋಷಣೆ ಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

17 mins ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

1 hour ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

1 hour ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

3 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

3 hours ago