ರಾಜ್ಯ

ಮೂಡಾ ಹಗರಣ| ಬಿಜೆಪಿಯಿಂದ ಅಹೋರಾತ್ರಿ ಧರಣಿ: ಸದನದಲ್ಲಿ ಹನುಮಾನ್‌ ಚಾಲೀಸ ಪಠಣ, ಶಾಸಕರಿಂದ ರಾಮ ಭಜನೆ

ಬೆಂಗಳೂರು: ಮೂಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಮೂಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಸದನದಲ್ಲಿ ಹನುಮಾನ್‌ ಚಾಲೀಸ್‌ ಪಠಣ ಮಾಡುವ ಮೂಲಕ ಬಿಜೆಪಿ ಸದಸ್ಯರು ಗಮನ ಸೆಳೆದಿದ್ದಾರೆ. ಬಿಜೆಪಿ ಶಾಸಕರಾದ ಭಾಗೀರಥಿ ಮುರಳ್ಯ ಹಾಗೂ ವೇದವ್ಯಾಸ ಕಾಮತ್‌ ಸದನದಲ್ಲಿ ಧರಣಿವೇಳೆ ಹನುಮಾನ್‌ ಚಾಲೀಸ್‌ ಪಠಣ ಮಾಡಿದರು. ಈ ವೇಳೆ ಇತರ ಸದಸ್ಯರು ಸಾಥ್‌ ನೀಡಿದರು.

ಇನ್ನೂ ಈ ವೇಳೆ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಆರ್‌ಎಸ್‌ಎಸ್‌ ಶಾಖೆಯ ಪ್ರಾರ್ಥನೆ ಮಾಡಲು ಮುಂದಾದರು. ಇದಕ್ಕೆ ವಿರೋಧ ಪಕ್ಷದ ನಾಯಕ ಬೇಡ ಎಂದು ಸೂಚಿಸಿದರು. ಹೀಗಾಗಿ ಪೂಂಜಾ ಸುಮ್ಮನಾದರು.

ಸರ್ಕಾರದ ಊಟ, ಹಾಸಿಗೆ ನಿರಾಕರಿಸಿದ ವಿಪಕ್ಷಗಳು
ಧರಣಿ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿ ಕಾರ್ಯದರ್ಶಿ ವಿಶಾಲಾಕ್ಷಿ ಶಾಸಕರಿಗೆ ರಾತ್ರಿ ಊಟದ ಬಗ್ಗೆ ವಿಚಾರಿಸಿದರು. ಈ ವೇಳೆ ಶಾಸಕರು ಹಗರಣದ ಹಣದ ಊಟದ ವ್ಯವಸ್ಥೆ ನಮಗೆ ಬೇಡ ಎಂದರು. ಜೊತೆಗೆ ರಾತ್ರಿಯ ಊಟ ಹಾಗೂ ಹಾಸಿಗೆ ವ್ಯವಸ್ಥೆಯನ್ನು ತಾವೇ ಮಾಡಿಕೊಳ್ಳುವುದಾಗಿ ತಿಳಿಸಿದರು. ಬಳಿಕ ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಅವರಿಗೆ ಸದಸ್ಯರಿಗೆ ಊಟ ಹಾಗೂ ಹಾಸಿಗೆ ವ್ಯವಸ್ಥೆ ಮಾಡುವ ಹೊಣೆ ನೀಡಿದರು.

ಏನಕ್ಕೆ ಧರಣಿ?
ಮೂಡಾ ಹಗರಣ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಜೆಪಿಯ ಸದಸ್ಯರು ಸದನದಲ್ಲಿ ಕೇಳಿದರು. ಈ ವೇಳೆ ಬಿಜೆಪಿಯ ನಿಲುವಳಿಯನ್ನು ಸ್ಪೀಕರ್‌ ಯು.ಟಿ ಖಾದರ್‌ ತಿರಸ್ಕರಿಸಿದರು. ಇದರಿಂದ ಮಾತಿನ ಚಕಮಕಿ, ಗದ್ದಲ, ಆರೋಪ-ಪ್ರತ್ಯರೋಪ ನಡೆದು ಪ್ರತಿಪಕ್ಷಗಳು ಸದನದ ಬಾವಿಗಿಳಿದು ಧರಣಿ ನಡೆಸಿತ್ತು. ಬಳಿಕ ಅಹೋರಾತ್ರಿ ಧರಣಿ ಘೋಷಣೆ ಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

29 mins ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

37 mins ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

6 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

6 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

6 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

6 hours ago