ರಾಜ್ಯ

ಮೂಡಾ ಹಗರಣ| ಬಿಜೆಪಿಯಿಂದ ಅಹೋರಾತ್ರಿ ಧರಣಿ: ಸದನದಲ್ಲಿ ಹನುಮಾನ್‌ ಚಾಲೀಸ ಪಠಣ, ಶಾಸಕರಿಂದ ರಾಮ ಭಜನೆ

ಬೆಂಗಳೂರು: ಮೂಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಮೂಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ-ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಸದನದಲ್ಲಿ ಹನುಮಾನ್‌ ಚಾಲೀಸ್‌ ಪಠಣ ಮಾಡುವ ಮೂಲಕ ಬಿಜೆಪಿ ಸದಸ್ಯರು ಗಮನ ಸೆಳೆದಿದ್ದಾರೆ. ಬಿಜೆಪಿ ಶಾಸಕರಾದ ಭಾಗೀರಥಿ ಮುರಳ್ಯ ಹಾಗೂ ವೇದವ್ಯಾಸ ಕಾಮತ್‌ ಸದನದಲ್ಲಿ ಧರಣಿವೇಳೆ ಹನುಮಾನ್‌ ಚಾಲೀಸ್‌ ಪಠಣ ಮಾಡಿದರು. ಈ ವೇಳೆ ಇತರ ಸದಸ್ಯರು ಸಾಥ್‌ ನೀಡಿದರು.

ಇನ್ನೂ ಈ ವೇಳೆ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಆರ್‌ಎಸ್‌ಎಸ್‌ ಶಾಖೆಯ ಪ್ರಾರ್ಥನೆ ಮಾಡಲು ಮುಂದಾದರು. ಇದಕ್ಕೆ ವಿರೋಧ ಪಕ್ಷದ ನಾಯಕ ಬೇಡ ಎಂದು ಸೂಚಿಸಿದರು. ಹೀಗಾಗಿ ಪೂಂಜಾ ಸುಮ್ಮನಾದರು.

ಸರ್ಕಾರದ ಊಟ, ಹಾಸಿಗೆ ನಿರಾಕರಿಸಿದ ವಿಪಕ್ಷಗಳು
ಧರಣಿ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿ ಕಾರ್ಯದರ್ಶಿ ವಿಶಾಲಾಕ್ಷಿ ಶಾಸಕರಿಗೆ ರಾತ್ರಿ ಊಟದ ಬಗ್ಗೆ ವಿಚಾರಿಸಿದರು. ಈ ವೇಳೆ ಶಾಸಕರು ಹಗರಣದ ಹಣದ ಊಟದ ವ್ಯವಸ್ಥೆ ನಮಗೆ ಬೇಡ ಎಂದರು. ಜೊತೆಗೆ ರಾತ್ರಿಯ ಊಟ ಹಾಗೂ ಹಾಸಿಗೆ ವ್ಯವಸ್ಥೆಯನ್ನು ತಾವೇ ಮಾಡಿಕೊಳ್ಳುವುದಾಗಿ ತಿಳಿಸಿದರು. ಬಳಿಕ ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಅವರಿಗೆ ಸದಸ್ಯರಿಗೆ ಊಟ ಹಾಗೂ ಹಾಸಿಗೆ ವ್ಯವಸ್ಥೆ ಮಾಡುವ ಹೊಣೆ ನೀಡಿದರು.

ಏನಕ್ಕೆ ಧರಣಿ?
ಮೂಡಾ ಹಗರಣ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಜೆಪಿಯ ಸದಸ್ಯರು ಸದನದಲ್ಲಿ ಕೇಳಿದರು. ಈ ವೇಳೆ ಬಿಜೆಪಿಯ ನಿಲುವಳಿಯನ್ನು ಸ್ಪೀಕರ್‌ ಯು.ಟಿ ಖಾದರ್‌ ತಿರಸ್ಕರಿಸಿದರು. ಇದರಿಂದ ಮಾತಿನ ಚಕಮಕಿ, ಗದ್ದಲ, ಆರೋಪ-ಪ್ರತ್ಯರೋಪ ನಡೆದು ಪ್ರತಿಪಕ್ಷಗಳು ಸದನದ ಬಾವಿಗಿಳಿದು ಧರಣಿ ನಡೆಸಿತ್ತು. ಬಳಿಕ ಅಹೋರಾತ್ರಿ ಧರಣಿ ಘೋಷಣೆ ಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago