ರಾಜ್ಯ

ಮುಡಾ ಹಗರಣ: ಬಗೆದಷ್ಟು ಬಯಲಾಗುತ್ತಿದೆ ದಿನೇಶ್‌ ಕುಮಾರ್‌ ವಂಚನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಆಕ್ರಮ ನಿವೇಶನ ಹಂಚಿಕೆ ಸಂಬಂದಿಸಿಧಿಸಿದಂತೆ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ನಕಲಿ ದಾಖಲಿ ಸೃಷ್ಟಿಸಿ ಕೋಟ್ಯಾಂತರ ರೂ ಬೆಲೆ ಬಾಳುವ ನಿವೇಶನಗಳನ್ನು ಮರುಹಂಚಿಕೆ ಮಾಡಿ ವಂಚನೆ ಎಸಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಚಾರ್ಚ್‍ಶೀಟ್ ಸಲ್ಲಿಕೆ ಮಾಡಿದೆ.

ದಿನೇಶ್ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್‌ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ. ತಮ್ಮ ಕುಟುಂಬದವರ ಹೆಸರಿನಲ್ಲಿ ಬೇನಾಮಿಯಾಗಿ 25 ಕೋಟಿ ಹಾಗೂ ಮನೆಕೆಲಸದ ರಮೇಶ್ ಎಂಬುವರ ಹೆಸರನಲ್ಲಿಯೂ ಆಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಇಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಿದೆ.

ಇಂದು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಇದೇ ಮೊದಲ ಬಾರಿಗೆ ಇ.ಡಿ ಚಾರ್ಚ್ ಶೀಟ್ ಸಲ್ಲಿಸಿರುವುದು ವಿಶೇಷ. ದಿನೇಶ್ ಕುಮಾರ್ ತಮ್ಮ ಮನೆಯ ಕೆಲಸದವನ ಹೆಸರಿನಲ್ಲಿಯೂ ಕೋಟಿ ಕೋಟಿ ಆಸ್ತಿ ಮಾಡಿರುವ ಆರೋಪವಿದೆ.

ನಕಲಿ ದಾಖಲೆಗಳನ್ನು ದಿನೇಶ್ ಕುಮಾರ್ ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್‌ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ. ಜಮೀನು ವಶಕ್ಕೆ ಪಡೆದು ನಿವೇಶನ ಕೊಟ್ಟಿದ್ದೇವೆ ಎಂದು ಸುಳ್ಳು ಹೇಳಿದ್ದ ದಿನೇಶ್ ಕುಮಾರ್, ತನಿಖೆ ವೇಳೆ ಜಮೀನು ವಶಕ್ಕೆ ಪಡೆಯದೇ ಪ್ರಭಾವಿಗಳಿಗೆ ಸೈಟು ಹಂಚಿಕೆ ಮಾಡಿರುವುದು ಸಾಬೀತಾಗಿದೆ. ಇನ್ನು ಕೋಟಿ ಕೋಟಿ ಬೆಲೆ ಬಾಳುವ ಸೈಟುಗಳನ್ನು ಲಕ್ಷ ರುಪಾಯಿಗೆ ಕೊಟ್ಟು ಕಿಕ್ ಬ್ಯಾಕ್ ಪಡೆದಿದ್ದ ದಿನೇಶ್ ಕುಮಾರ್, ಮುಡಾಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬುದು ತನಿಖೆಯಿಂದ ಬಹಿರಂಗವಾಗಿದೆ ಎಂಬುದು ಉಲ್ಲೇಖವಾಗಿದೆ.

ಕಳೆದ 2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಯಾವುದೇ ಸ್ಥಳ ತೋರಿಸದೇ ದಿನೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ ನಂತರ ಹಾವೇರಿ ವಿವಿಯ ಕುಲಸಚಿವ ಹುದ್ದೆಯನ್ನು ನೀಡಿತ್ತು. ಕುಲಸಚಿವ ಹುದ್ದೆಯನ್ನು ನೀಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸರ್ಕಾರ ಕೊನೆಗೆ ಆ ಆದೇಶವನ್ನೇ ರದ್ದು ಮಾಡಿತ್ತು

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಅಕ್ರಮವಾಗಿ ನೀಡಿದ್ದ 440 ಕೋಟಿ ರೂ ಮೌಲ್ಯದ 252 ನಿವೇಶನಗಳನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

14 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago