ರಾಜ್ಯ

ಮುಡಾ ಹಗರಣ: ಬಗೆದಷ್ಟು ಬಯಲಾಗುತ್ತಿದೆ ದಿನೇಶ್‌ ಕುಮಾರ್‌ ವಂಚನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಆಕ್ರಮ ನಿವೇಶನ ಹಂಚಿಕೆ ಸಂಬಂದಿಸಿಧಿಸಿದಂತೆ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ನಕಲಿ ದಾಖಲಿ ಸೃಷ್ಟಿಸಿ ಕೋಟ್ಯಾಂತರ ರೂ ಬೆಲೆ ಬಾಳುವ ನಿವೇಶನಗಳನ್ನು ಮರುಹಂಚಿಕೆ ಮಾಡಿ ವಂಚನೆ ಎಸಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಚಾರ್ಚ್‍ಶೀಟ್ ಸಲ್ಲಿಕೆ ಮಾಡಿದೆ.

ದಿನೇಶ್ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್‌ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ. ತಮ್ಮ ಕುಟುಂಬದವರ ಹೆಸರಿನಲ್ಲಿ ಬೇನಾಮಿಯಾಗಿ 25 ಕೋಟಿ ಹಾಗೂ ಮನೆಕೆಲಸದ ರಮೇಶ್ ಎಂಬುವರ ಹೆಸರನಲ್ಲಿಯೂ ಆಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಇಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಿದೆ.

ಇಂದು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಇದೇ ಮೊದಲ ಬಾರಿಗೆ ಇ.ಡಿ ಚಾರ್ಚ್ ಶೀಟ್ ಸಲ್ಲಿಸಿರುವುದು ವಿಶೇಷ. ದಿನೇಶ್ ಕುಮಾರ್ ತಮ್ಮ ಮನೆಯ ಕೆಲಸದವನ ಹೆಸರಿನಲ್ಲಿಯೂ ಕೋಟಿ ಕೋಟಿ ಆಸ್ತಿ ಮಾಡಿರುವ ಆರೋಪವಿದೆ.

ನಕಲಿ ದಾಖಲೆಗಳನ್ನು ದಿನೇಶ್ ಕುಮಾರ್ ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್‌ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ. ಜಮೀನು ವಶಕ್ಕೆ ಪಡೆದು ನಿವೇಶನ ಕೊಟ್ಟಿದ್ದೇವೆ ಎಂದು ಸುಳ್ಳು ಹೇಳಿದ್ದ ದಿನೇಶ್ ಕುಮಾರ್, ತನಿಖೆ ವೇಳೆ ಜಮೀನು ವಶಕ್ಕೆ ಪಡೆಯದೇ ಪ್ರಭಾವಿಗಳಿಗೆ ಸೈಟು ಹಂಚಿಕೆ ಮಾಡಿರುವುದು ಸಾಬೀತಾಗಿದೆ. ಇನ್ನು ಕೋಟಿ ಕೋಟಿ ಬೆಲೆ ಬಾಳುವ ಸೈಟುಗಳನ್ನು ಲಕ್ಷ ರುಪಾಯಿಗೆ ಕೊಟ್ಟು ಕಿಕ್ ಬ್ಯಾಕ್ ಪಡೆದಿದ್ದ ದಿನೇಶ್ ಕುಮಾರ್, ಮುಡಾಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬುದು ತನಿಖೆಯಿಂದ ಬಹಿರಂಗವಾಗಿದೆ ಎಂಬುದು ಉಲ್ಲೇಖವಾಗಿದೆ.

ಕಳೆದ 2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಯಾವುದೇ ಸ್ಥಳ ತೋರಿಸದೇ ದಿನೇಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ ನಂತರ ಹಾವೇರಿ ವಿವಿಯ ಕುಲಸಚಿವ ಹುದ್ದೆಯನ್ನು ನೀಡಿತ್ತು. ಕುಲಸಚಿವ ಹುದ್ದೆಯನ್ನು ನೀಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸರ್ಕಾರ ಕೊನೆಗೆ ಆ ಆದೇಶವನ್ನೇ ರದ್ದು ಮಾಡಿತ್ತು

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಅಕ್ರಮವಾಗಿ ನೀಡಿದ್ದ 440 ಕೋಟಿ ರೂ ಮೌಲ್ಯದ 252 ನಿವೇಶನಗಳನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

3 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

3 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

3 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

3 hours ago