Mysore
27
haze

Social Media

ಮಂಗಳವಾರ, 18 ನವೆಂಬರ್ 2025
Light
Dark

ಮುಡಾ ಪ್ರಕರಣ: ಇ.ಡಿ. ವಿಚಾರಣೆಗೆ ಹಾಜರಾದ ಗಂಗರಾಜು

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಇಂದು(ನ.27) ಆರ್‌ಐಟಿ ಕಾರ್ಯಕರ್ತ ಗಂಗರಾಜು ದಾಖಲೆಗಳ ಸಮೇತ ಇ.ಡಿ. ತನಿಖಾ ಸಂಸ್ಥೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಮುಡಾ ಪ್ರಕರಣ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ದಿನ ಕಳೆದಂತೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೇ  ಗಂಗರಾಜು ಇ.ಡಿ. ತನಿಖೆಗೆ ಹಾಜರಾಗಿದ್ದು, ಹಲವು ಮಾಹಿತಿಗಳನ್ನು ಅಧಿಕಾರಿಗಳಿಗೆ ನೀಡಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಇಂದು ಸಂಜೆಯವರೆಗೂ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ದೊರಯಲಿದೆ ಎಂದು ಹೇಳಲಾಗುತ್ತಿದೆ.

ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಗರಾಜು ಅವರು ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಇ.ಡಿ. ಅಧಿಕಾರಿಗಳು ಇಂದು ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು.

ಈ ನೋಟಿಸ್‌ನ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಕೆ ಮಾಡಿದ್ದ ಎಲ್ಲಾ ದಾಖಲೆಗಳೊಂದಿಗೆ ಇಡಿ ಕಚೇರಿಗೆ ಹಾಜರಾಗಿದ್ದಾರೆ.

 

Tags:
error: Content is protected !!