ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಇಂದು(ನ.27) ಆರ್ಐಟಿ ಕಾರ್ಯಕರ್ತ ಗಂಗರಾಜು ದಾಖಲೆಗಳ ಸಮೇತ ಇ.ಡಿ. ತನಿಖಾ ಸಂಸ್ಥೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಮುಡಾ ಪ್ರಕರಣ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ದಿನ ಕಳೆದಂತೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೇ ಗಂಗರಾಜು ಇ.ಡಿ. ತನಿಖೆಗೆ ಹಾಜರಾಗಿದ್ದು, ಹಲವು ಮಾಹಿತಿಗಳನ್ನು ಅಧಿಕಾರಿಗಳಿಗೆ ನೀಡಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಇಂದು ಸಂಜೆಯವರೆಗೂ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ದೊರಯಲಿದೆ ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಗರಾಜು ಅವರು ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಇ.ಡಿ. ಅಧಿಕಾರಿಗಳು ಇಂದು ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ಈ ನೋಟಿಸ್ನ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಕೆ ಮಾಡಿದ್ದ ಎಲ್ಲಾ ದಾಖಲೆಗಳೊಂದಿಗೆ ಇಡಿ ಕಚೇರಿಗೆ ಹಾಜರಾಗಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…