Categories: ರಾಜ್ಯ

ಮುಡಾ ಪ್ರಕರಣ: ಇ.ಡಿ. ವಿಚಾರಣೆಗೆ ಹಾಜರಾದ ಗಂಗರಾಜು

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಇಂದು(ನ.27) ಆರ್‌ಐಟಿ ಕಾರ್ಯಕರ್ತ ಗಂಗರಾಜು ದಾಖಲೆಗಳ ಸಮೇತ ಇ.ಡಿ. ತನಿಖಾ ಸಂಸ್ಥೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಮುಡಾ ಪ್ರಕರಣ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ದಿನ ಕಳೆದಂತೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೇ  ಗಂಗರಾಜು ಇ.ಡಿ. ತನಿಖೆಗೆ ಹಾಜರಾಗಿದ್ದು, ಹಲವು ಮಾಹಿತಿಗಳನ್ನು ಅಧಿಕಾರಿಗಳಿಗೆ ನೀಡಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಇಂದು ಸಂಜೆಯವರೆಗೂ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ದೊರಯಲಿದೆ ಎಂದು ಹೇಳಲಾಗುತ್ತಿದೆ.

ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಗರಾಜು ಅವರು ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಇ.ಡಿ. ಅಧಿಕಾರಿಗಳು ಇಂದು ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು.

ಈ ನೋಟಿಸ್‌ನ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಕೆ ಮಾಡಿದ್ದ ಎಲ್ಲಾ ದಾಖಲೆಗಳೊಂದಿಗೆ ಇಡಿ ಕಚೇರಿಗೆ ಹಾಜರಾಗಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

24 mins ago

ಟಿ.ನರಸೀಪುರ: ಗುಂಜಾನರಸಿಂಹಸ್ವಾಮಿ ದರ್ಶನಕ್ಕೆ ಹರಿದುಬಂದ ಜನಸಾಗರ

ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…

39 mins ago

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…

2 hours ago

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್‌…

2 hours ago

ಮೈಸೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ: ದೇಗುಲಗಳಲ್ಲಿ ಭಕ್ತಸಾಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…

2 hours ago

ಹೊಸ ವರ್ಷಾಚರಣೆ: ರಾಜ್ಯದೆಲ್ಲೆಡೆ ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…

3 hours ago