ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಇ.ಡಿ. ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ಇಂದು(ನ.27) ಆರ್ಐಟಿ ಕಾರ್ಯಕರ್ತ ಗಂಗರಾಜು ದಾಖಲೆಗಳ ಸಮೇತ ಇ.ಡಿ. ತನಿಖಾ ಸಂಸ್ಥೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಮುಡಾ ಪ್ರಕರಣ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ದಿನ ಕಳೆದಂತೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಬೆನ್ನಲ್ಲೇ ಗಂಗರಾಜು ಇ.ಡಿ. ತನಿಖೆಗೆ ಹಾಜರಾಗಿದ್ದು, ಹಲವು ಮಾಹಿತಿಗಳನ್ನು ಅಧಿಕಾರಿಗಳಿಗೆ ನೀಡಲಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಇಂದು ಸಂಜೆಯವರೆಗೂ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ದೊರಯಲಿದೆ ಎಂದು ಹೇಳಲಾಗುತ್ತಿದೆ.
ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಗರಾಜು ಅವರು ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಇ.ಡಿ. ಅಧಿಕಾರಿಗಳು ಇಂದು ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.
ಈ ನೋಟಿಸ್ನ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಕೆ ಮಾಡಿದ್ದ ಎಲ್ಲಾ ದಾಖಲೆಗಳೊಂದಿಗೆ ಇಡಿ ಕಚೇರಿಗೆ ಹಾಜರಾಗಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…