ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ʼಸಿದ್ದಾಪರಾಧʼ ಸಾಬೀತಿಗೆ ಇನ್ನೊಂದು ಹೆಜ್ಜೆ ಬಾಕಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಮುಡಾ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ತನಿಖಾ ಸ್ಥಿತಿ ನೆನೆದು ಪೋಸ್ಟ್ ಮಾಡಿದ್ದಾರೆ.
ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇ ಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿದ್ರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ಅದೇ ಲೋಕಾಯುಕ್ತವೇ ಗತಿ ಎಂದು ಅಪಹಾಸ್ಯ ಮಾಡಿದ್ದಾರೆ.
ಕರ್ಮ ಹಿಟ್ ಬ್ಯಾಕ್ ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನು ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಲೆಕ್ಕ ʼಸಿದ್ದಾಪರಾಧ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಇದೆ ಎಂಬುದನ್ನು ತಿಳಿಸಿದ್ದಾರೆ.
ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ? ಆದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರೀ? ಎಂದು ಪೋಸ್ಟ್ ಮಾಡುವ ಮೂಲಕ ಸಿದ್ದರಾಮಯ್ಯರಿಗೆ ಲೇವಡಿ ಮಾಡಿದ್ದಾರೆ.
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …
ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…
ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…
ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…
ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…