ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತನಿಖೆಯ ಆದೇಶವನ್ನು ಕಾಯ್ದಿರಿಸಿದೆ.
ಈ ವಿಚಾರವಾಗಿ ಧಾರವಾಡದ ಹೈಕೋರ್ಟ್ನಲ್ಲಿ ಇಂದು(ಜನವರಿ.27) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ವಿಚಾರಣೆ ನಡೆಸಿದೆ. ಈ ವೇಳೆ ಸ್ನೇಹಮಯಿ ಕೃಷ್ಣ ಪರ ವಾದ ಹಾಗೂ ಸಿಎಂ ಸಿದ್ದರಾಮಯ್ಯ ಪರ ಪ್ರತಿವಾದಗಳನ್ನು ಆಲಿಸಿದ ಬಳಿಕ ಸಿಬಿಐ ತನಿಖೆಗೆ ನೀಡುವ ಆದೇಶವನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದೆ.
ಇನ್ನೂ ಮುಡಾ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಅಧಿಕಾರಿಗಳಿಗೆ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಲಾಗಿದೆ. ಅಲ್ಲದೇ ಹೈಕೋರ್ಟ್ ತನ್ನ ಆದೇಶವನ್ನು ಪ್ರಕಟಿಸುವವರೆಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವಂತಿಲ್ಲ ಎಂದು ಸೂಚನೆ ನೀಡಿದೆ.
‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ,…
ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ…
ಪುನೀತ್ ರಾಜ್ಕುಮಾರ್ ಇದ್ದಿದ್ದರೆ, ದೊಡ್ಡ ಸಂಭ್ರಮ ಮನೆ ಮಾಡಿರುತ್ತಿತ್ತು. ಮಾರ್ಚ್ ೧೭ಕ್ಕೆ ಅವರು ೫೦ ಮುಗಿಸಿ,೫೧ನೇ ವರ್ಷಕ್ಕೆಕಾಲಿಡುತ್ತಿದ್ದರು. ಪುನೀತ್ ಇಲ್ಲದ…
ಮನದ ಕಡಲು ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ರಮ್ಯಾ ಕನ್ನಡ ಚಿತ್ರರಂಗದಲ್ಲಿ ನಾಯಕಿಯರಿಗೆ ಕಡಿಮೆ ಸಂಭಾವನೆ ನೀಡಲಾಗುತ್ತದೆ. ಜೊತೆಗೆ ಒಳ್ಳೆಯ…
ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ…
ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ…