ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತೀರ್ಪು ಬಂದ ಬಳಿಕವೇ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಗಸ್ಟ್.31ರಂದು ಪಕ್ಷದ ವತಿಯಿಂದ ಪ್ರತಿಭಟನೆ ಮಾಡುತ್ತೇವೆ. ಶಾಸಕರೆಲ್ಲರೂ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ. ನಾವೆಲ್ಲಾ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾವ ತೀರ್ಪು ಬರುತ್ತೆ ನೋಡಬೇಕು. ಆ ನಂತರ ರಾಷ್ಟ್ರಪತಿ ಭೇಟಿ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.
ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರೊಚ್ಚಿಗೆದ್ದಿರುವ ಕಾಂಗ್ರೆಸ್ ನಾಯಕರು, ಗವರ್ನರ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಆಗಸ್ಟ್.31ರಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜಭವನ ಚಲೋಗೆ ಕರೆ ನೀಡಿದ್ದಾರೆ. ಇನ್ನು ಮುಡಾ ಹಗರಣ ಸಂಬಂಧ ನಾಳೆ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ನಾಳೆಯಿಂದ ಪ್ರತಿಭಟನೆ ತೀವ್ರಗೊಳ್ಳುವುದು ಪಕ್ಕಾ ಎನ್ನಲಾಗುತ್ತಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…