ರಾಜ್ಯ

ಮುಡಾ ಹಗರಣ| ತನಿಖಾಧಿಕಾರಿ ಬದಲಾವಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಹಾಗೂ ತನಿಖಾಧಿಕಾರಿ ಬದಲಾವಣೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಇದೇ ವೇಳೆ ಎರಡು ತಿಂಗಳೊಳಗೆ ತನಿಖಾ ವರದಿಉನ್ನು ಪೂರ್ಣಗೊಳಿಸುವಂತೆ ಲೋಕಾಯುಕ್ತ ತನಿಖಾ ಅಧಿಕಾರಿಗಳಿಗೆ ಸೂಚಿಸಿರುವ ನ್ಯಾಯಾಲಯ ಅಂತಿಮ ಆದೇಶವನ್ನು ಇದೇ ತಿಂಗಳ.15ರಂದು ಪ್ರಕಟಿಸುವುದಾಗಿ ತಿಳಿಸಿದೆ.

ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಇಂದು ಅಂತಿಮ ಆದೇಶ ನೀಡುವುದಾಗಿ ತಿಳಿಸಿತ್ತು. ಬುಧವಾರ ವಿಚಾರಣೆ ಸಂದರ್ಭದಲ್ಲಿ ಆದೇಶವನ್ನು ಗುರುವಾರ ಪ್ರಕಟಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿತು. ಆದರೆ, ಬೆಂಗಳೂರು ವಿಶೇಷ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಅಂತಿಮ ಆದೇಶವನ್ನು ಆ.15ಕ್ಕೆ ಕಾಯ್ದಿರಿಸಿದ್ದಾರೆ.

ಇದನ್ನು ಓದಿ : ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು

ಮುಡಾದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕುಟುಂಬ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಲ್ಲಿಸಿರುವ ಬಿ ರಿಪೋರ್ಟ್ ತಿರಸ್ಕರಿಸಬೇಕು. ಪ್ರಕರಣದ ತನಿಖಾಧಿಕಾರಿಯಾಗಿರುವ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್, ಸರಿಯಾದ ತನಿಖೆ ಮಾಡದೆ ಆರೋಪಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಹೀಗಾಗಿ ತನಿಖಾಧಿಕಾರಿಯನ್ನು ಬದಲಿಸಬೇಕು ಎಂದು ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈಗಾಗಲೇ ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ವಿರುದ್ಧ ಇ.ಡಿ. ಆರಂಭಿಸಿರುವ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅದಕ್ಕೂ ಮುನ್ನ ಕರ್ನಾಟಕ ಹೈಕೋರ್ಟ್ ಕೂಡ ಇ.ಡಿ. ಪ್ರಕಣವನ್ನು ರದ್ದು ಮಾಡಿತ್ತು.
ಮುಡಾ ಹಗರಣ ಸಂಬಂಧ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಟುಂಬಸ್ಥರ ವಿಚಾರಣೆ ನಡೆಸಿ ಸಾಕ್ಷ್ಯಾಧಾರಗಳ ಕೊರತೆಯಿಂದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿ ಸಲ್ಲಿಸಿದ್ದರು.

ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ ಹಾಗೂ ಕರ್ನಾಟಕ ಭೂ ಕಬಳಿಕೆ ಕಾಯ್ದೆಗಳು ಒಳಗೊಂಡಂತೆ ವಿವಿಧ ಐಪಿಸಿ ಸೆಕ್ಷನ್‌ಗಳಡಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಜಮೀನು ಮಾಲೀಕ ದೇವರಾಜ್ ವಿರುದ್ಧ ಲೋಕಾಯುಕ್ತದಲ್ಲಿ ಎಫ್‍ಐಆರ್ ದಾಖಲಾಗಿತ್ತು. ತನಿಖೆ ನಡೆಸಿದ ಮೈಸೂರು ಲೋಕಾಯುಕ್ತ ತನಿಖಾಧಿಕಾರಿ ಎಸ್ಪಿ ಉದೇಶ್ ಸುಮಾರು 11,200 ಪುಟಗಳ 27 ಸಂಪುಟ ಹೊಂದಿರುವ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದರು. ಇದನ್ನು ಪ್ರಶ್ನಿಸಿ ಸ್ನೇಹಮಹಿ ಕೃಷ್ಣ ಪ್ರತಿಭಟನಾ ಅರ್ಜಿ ಸಲ್ಲಿಸಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago