ರಾಜ್ಯ

ಮುಡಾ ಪ್ರಕರಣ: ಹೈಕೋರ್ಟ್‌ಗೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜ.25ಕ್ಕೆ ಮುಂದೂಡಿಕೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 25ಕ್ಕೆಮುಂದೂಡಲಾಗಿದೆ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ.

ಈ ಕುರಿತು ಇಂದು(ಡಿ.5) ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ವಿಚಾರಣೆ ನಡೆಸಿ, ಪ್ರತಿವಾದಗಳಿಗೆ ನೋಟಿಸ್‌ ನೀಡಿ ಈ ಅರ್ಜಿ ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.

ಈ ವೇಳೆ ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲ ಕಪಿಲ್‌ ಸಿಬಲ್‌ ಅವರು ರಾಜ್ಯಪಾಲರು ಯಾವುದೇ ಪ್ರಾಥಮಿಕ ತನಿಖೆ ಮಾಡದೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರಿಗೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಧಿಕಾರವಿಲ್ಲ. ಸಾಂವಿಧಾನಿಕ ಪೀಠದ ತೀರ್ಪಿನ ಪ್ರಕಾರ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯುವ ಅಧಿಕಾರ ಸಭಾಪತಿಗಳಿಗೆ ಇದೆ. ಆದರೆ ರಾಜ್ಯಪಾಲರಿಗೆ ತನಿಖೆ ಮಾಡುವ ಯಾವ ಅಧಿಕಾರ ಇದೆ? ರಾಜ್ಯಪಾಲರು ಮುಡಾ ಪ್ರಕರಣವನ್ನು ರಾಷ್ಟ್ರಪತಿಗೆ ವರ್ಗಾಯಿಸಬಹುದಿತ್ತು ಎಂದು ಹೇಳಿದ್ದಾರೆ.

ಹೈಕೋರ್ಟ್‌ ಏಕ ಸದಸ್ಯ ಪೀಠವೂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಹುದೆಂಬ ಆದೇಶ ನೀಡಿತ್ತು. ಈ ಆದೇಶದ ಮೇರೆಗೆ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಆದರೆ ರಾಜ್ಯಪಾಲರ ಆದೇಶದ ಅನುಮತಿಯನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರ ಪರ ವಕೀಲ ಅಭೀಷೇಕ್‌ ಸಿಂಘ್ವಿ ಹೈಕೋರ್ಟ್‌ನಲ್ಲಿ ರಾಜ್ಯಪಾಲರ ವಿರುದ್ಧ ವಿಚಾರಣಾ ಅರ್ಜಿ ಸಲ್ಲಿಸಿದ್ದರು.

ಏನಿದು ಪ್ರಕರಣ?
ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು 50:50 ಅನುಪಾತದ ಬದಲಿ 14 ನಿವೇಶನಗಳಿಗೆ ಸಂಬಂಧಿಸಿದಂತೆ ತಮ್ಮ ರಾಜಕೀಯ ಪ್ರಭಾವ ಬೀರಿ ನಿವೇಶನಗಳನ್ನು ಪಡೆದು ಹಗರಣ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ದೂರುದಾರರ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.

ಈ ದೂರಿನ ಆಧಾರದ ಮೇಲೆ ರಾಜ್ಯಪಾಲರು ಹೈಕೋರ್ಟ್‌ನ ಏಕ ಸದಸ್ಯ ಪೀಠಕ್ಕೆ ಸಿಎಂ ಸಿದ್ದರಾಮಯ್ಯ
ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಹುದೆಂಬ ಪ್ರಶ್ನೆ ಕೋರಿ ವಿಚಾರಣಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಹುದು ಎಂದು ತೀರ್ಪು ಪ್ರಕಟಿಸಿತ್ತು.

ಹೈಕೋರ್ಟ್‌ನ ಏಕ ಸದಸ್ಯ ಪೀಠದ ತೀರ್ಪಿನ ಅನ್ವಯ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ತನಿಖೆ ನಡೆಸುವಂತೆ ಆದೇಶ ಹೊರಡಿಸಿದ್ದರು. ರಾಜ್ಯಪಾಲರ ಈ ಆದೇಶವನ್ನು ಪ್ರಶ್ನಿಸಿ
ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

6 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

6 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

7 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

16 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

16 hours ago