ಬೆಂಗಳೂರು: ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಸಮೇತ ಸಾಕ್ಷಿ ನೀಡಿರುವ ಸಿಎಂ ಸಿದ್ದರಾಮಯ್ಯ ಮುಡಾ ದಾಖಲೆಗಳಲ್ಲಿ ವೈಟ್ನರ್ ಹಚ್ಚಿ ಅಕ್ರಮ ಮರೆ ಮಾಚಿದ್ದಾರೆ ಎಂಬ ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ವಿಡಿಯೋ ಪೋಸ್ಟ್ನಲ್ಲಿ ಏನಿದೆ?
ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದಿದ್ದಾರೆ.
“ವೈಟ್ನರ್ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ ಎಂದು ವಿಪಕ್ಷ ನಾಯಕರನ್ನು ಟೀಕಿಸಿದ್ದಾರೆ.
ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಎಂದು ಸಿಎಂ ಬರೆದುಕೊಂಡಿದ್ದಾರೆ.
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…
ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…