ರಾಜ್ಯ

ಮುಡಾ ಅಕ್ರಮ : ವೈಟ್ನರ್‌ ಹಿಂದಿರುವ ಅಕ್ಷರಗಳೇನು? ಸಾಕ್ಷಿ ಸಮೇತ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ-ಜೆಡಿಎಸ್‌ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ವಿಡಿಯೋ ಸಮೇತ ಸಾಕ್ಷಿ ನೀಡಿರುವ ಸಿಎಂ ಸಿದ್ದರಾಮಯ್ಯ ಮುಡಾ ದಾಖಲೆಗಳಲ್ಲಿ ವೈಟ್ನರ್‌ ಹಚ್ಚಿ ಅಕ್ರಮ ಮರೆ ಮಾಚಿದ್ದಾರೆ ಎಂಬ ವಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

ವಿಡಿಯೋ ಪೋಸ್ಟ್‌ನಲ್ಲಿ ಏನಿದೆ?
ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದಿದ್ದಾರೆ.

“ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ ಎಂದು ವಿಪಕ್ಷ ನಾಯಕರನ್ನು ಟೀಕಿಸಿದ್ದಾರೆ.

ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಎಂದು ಸಿಎಂ ಬರೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago