ಬೆಂಗಳೂರು/ಮೈಸೂರು: ಮುಡಾ ಹಗರಣದಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಇದೀಗ ಉದ್ಯಮಿ ಜಯರಾಂ ಅವರ ನಿವಾಸ ವಕ್ರತುಂಡದಲ್ಲಿ ಸುಮಾರು 70 ಗಂಟೆಗಳ ಕಾಲ ವಿಚಾರಣೆ ನಡೆಸಿ, ಅನೇಕ ಬೇನಾಮಿ ಆಸ್ತಿ ಅಕ್ರಮವಾಗಿದೆ ಎಂದು ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಹಂಚಿಕೆ ಮಾಡಿರುವ ಮುಡಾ ನಿವೇಶನದಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು 2024ರ ಅಕ್ಟೋಬರ್ 29 ರಂದು ಉದ್ಯಮಿ ಜಯರಾಂ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ದಾಳಿಯ ವೇಳೆ ಸುಮಾರು 300 ಕೋಟಿ ರೂ.ಮೌಲ್ಯದ ಬೇನಾಮಿ ಆಸ್ತಿಯೂ ಮುಡಾದಲ್ಲಿ ಹಗರಣವಾಗಿದೆ ಎಂದು ಇ.ಡಿ. ಸಂಸ್ಥೆಯೂ ತಿಳಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ತನಿಖೆ ನಡೆಸುವ ವೇಳೆ ಉದ್ಯಮಿ ಜಯರಾಂ ಅವರ ನಿವಾಸದಲ್ಲಿ ಮುಡಾ ಹಗರಣದ ಮಹತ್ವದ ಡೈರಿ ಹಾಗೂ ವ್ಯಾಟ್ಸ್ಹ್ಯಾಪ್ನಲ್ಲಿ ಹಗರಣ ಬಯಲಾಗಿದ್ದು, ವಿವಿಧ ರಿಯಲ್ ಎಸ್ಟೇಟ್ ಉದ್ಯಮಿ, ಏಜೆಂಟ್ ಹಾಗೂ ರಾಜಕಾರಣಿಗಳ ಹೆಸರು ಉಲ್ಲೇಖವಾಗಿದೆ.
ಮುಡಾ ಹಗರಣದಲ್ಲಿ ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡುವ ಸಲುವಾಗಿ ವಂಚಕರು ʼಕೋಕ್ನೆಟ್ʼ ಎಂಬ ಕೋಡ್ವರ್ಡ್ ಇಟ್ಟುಕೊಂಡು ಹಣವನ್ನು ವರ್ಗಾವಣೆ ಮಾಡುತ್ತಿದ್ದರು. ಈ ಮಾಹಿತಿಯೂ ಜಯರಾಂ ಅವರ ವಾಟ್ಸ್ಹ್ಯಾಪ್ನಿಂದ ತಿಳಿದು ಬಂದಿದೆ. ಅಲ್ಲದೇ ಇ.ಡಿ.ಅಧಿಕಾರಿಗಳಿಗೆ ಸಿಕ್ಕಿರುವ ಡೈರಿಯಲ್ಲಿ ಮಾಜಿ ಮುಡಾ ಆಯುಕ್ತರಾದ ತೇಜಸ್ ಗೌಡ ಹಾಗೂ ದಿನೇಶ್ ಅವರ ಹೆಸರನ್ನು ದಾಖಲಿಸಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…