ರಾಜ್ಯ

ಮುಡಾ ಬದಲಿ ನಿವೇಶನ ವಾಪಸ್‌ ವಿಚಾರಕ್ಕೆ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ

ಬೆಂಗಳೂರು: ಮುಡಾದ 14 ಬದಲಿ ನಿವೇಶನಗಳನ್ನು ವಾಪಸ್ಸು ನೀಡಿರುವುದು ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ನಾಟಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್‌ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಎಫ್‌ಆರ್‌ಐ ದಾಖಲಿಸುವಂತೆ ಆದೇಶಿಸಿ ತನಿಖೆ ನಡೆಸಲು ಹೇಳಿದೆ. ನಿನ್ನೆ ಇ.ಡಿ ಕೇಸ್‌ ದಾಖಲಾಗಿದೆ. ಆದರೆ, ಇದೀಗ ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯ ತಮ್ಮ ಪತ್ನಿಗೆ ಹೇಳಿ ನಿವೇಶನಗಳನ್ನು ವಾಪಸ್ಸು ನೀಡಿರುವುದು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರು ರಾಜಕೀಯ ಸಹಾನುಭೂತಿ ಪಡೆಯಲು, ಅಧಿಕಾರಕ್ಕಾಗಿ ಮತ್ತು ತೊಡೆ ತಟ್ಟುವ ಸ್ವಪಕ್ಷೀಯದವರನ್ನು ಸುಮ್ಮನಾಗಿಸಲು ನಿವೇಶನಗಳನ್ನು ವಾಪಸ್‌ ನೀಡುವ ಮೂಲಕ ರಾಜಕೀಯ ನಾಟಕ ಮಾಡುತ್ತಿದ್ದಾರೆ. ಅಲ್ಲದೇ ಸಿಎಂ ಹುದ್ದೆಗೆ ಯಾವುದೇ ಕ್ಷಣದಲ್ಲಿ ಬೇಕಾದರೂ ರಾಜೀನಾಮೆ ನೀಡಬಹುದು. ಈ ವಿಚಾರ ಸಹ ಕೆಲವೇ ಗಂಟೆಗಳಲ್ಲಿ ನಡೆದರೂ ಆಶ್ಚರ್ಯವಿಲ್ಲ ಎಂದು ಲೇವಡಿ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

53 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

57 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

1 hour ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

1 hour ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago