ಬೆಂಗಳೂರು: 14 ಸೈಟ್ ವಾಪಸ್ ನೀಡುವ ಬಗ್ಗೆ ನನ್ನ ಹೆಂಡತಿ ನನ್ನ ಜೊತೆ ಚರ್ಚೆಯೇ ಮಾಡಿಲ್ಲ. ಪತಿಗೆ ಕಳಂಕ ಬರಬಾರದು ಎಂದು ಮನನೊಂದು ಸೈಟ್ ವಾಪಸ್ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರು ಮುಡಾ ಹಗರಣದ ಸಂಬಂಧ 14 ಸೈಟ್ ವಾಪಸ್ ನೀಡುವುದಾಗಿ ತನ್ನ ಪತ್ನಿ ಪಾರ್ವತಿ ಅವರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸೈಟ್ ವಾಪಸ್ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿಲ್ಲ. ನನ್ನ ಹೆಂಡತಿ ಸ್ವತಂತ್ರ ನಿರ್ಧಾರ ತೆಗೆದುಕೊಂಡಿದ್ದಾರೆ. ನನ್ನ ಪತಿಗೆ ತೇಜೋವಧೆ ರಾಜಕೀಯ ದ್ವೇಷ ಮಾಡುತ್ತಿದ್ದಾರೆ. ಹೀಗಾಗಿ ಸೈಟ್ ಬೇಡ ಎಂದು ವಾಪಸ್ ಕೊಟ್ಟಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ಮನನೊಂದು ಸೈಟ್ ವಾಪಸ್ ನೀಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ತಮ್ಮ ರಾಜೀನಾಮೆಗೆ ಬಿಜೆಪಿ ನಾಯಕರ ಆಗ್ರಹ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಮುಡಾ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ನಾನು ತಪ್ಪೇ ಮಾಡಿಲ್ಲ. ಯಾಕೆ ನಾನು ರಾಜೀನಾಮೆ ಕೊಡಬೇಕು. ತಪ್ಪು ಮಾಡಿದ್ದರೇ ಮಾತ್ರ ರಾಜೀನಾಮೆ ಕೊಡಬೇಕು. ನಾನು ತಪ್ಪು ಮಾಡಿಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…