ರಾಜ್ಯ

ಮೊಘಲರು ಹುಟ್ಟಿ ಬಂದ್ರೂ ಹಿಂದೂ ರಾಷ್ಟ್ರ ಕಲ್ಪನೆಯನ್ನು ತಡೆಯಲು ಸಾಧ್ಯವಿಲ್ಲ: ವಿಜಯೇಂದ್ರ

ಬೆಂಗಳೂರು : “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪವಾಗಿದೆ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಹಿಂದೂಗಳು ಉಳಿಯಬೇಕಾದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಹಿಂದೂ ರಾಷ್ಟ್ರ ನಿರ್ಮಾಣ ಆಗುವುದಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಪೂಜ್ಯ ಪೇಜಾವರ ಶ್ರೀಗಳ ‘ಹಿಂದೂ ರಾಷ್ಟ್ರದ ಪ್ರತಿಪಾದನೆ’ ಇನ್ನೊಬ್ಬರನ್ನು ಹೊರಗಟ್ಟುವುದಲ್ಲ, ಬಲವಂತ ಮತಾಂತರವಲ್ಲ, ಎಲ್ಲರನ್ನೂ ಒಳಗೊಂಡ ನೈಜ ಭಾರತೀಯತೆಯನ್ನು ರಕ್ಷಿಸುವುದು ಭಾರತದ ಅಸ್ತಿತ್ವವಾಗಿದೆ ಎಂದು ಅಭಿಪ್ರಯಾಪಟ್ಟಿದ್ದಾರೆ.

ಭಾರತವೆಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಹುತ್ವ, ವಿವಿಧತೆಯನ್ನು ತನ್ನ ಒಡಲಲ್ಲಿರಿಸಿಕೊಂಡು ಏಕತೆಯನ್ನು ಮೆರೆಯುತ್ತಿರುವುದೇ ಭಾರತೀಯತೆಯಾಗಿದೆ. ಈ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲು ಶತ ಶತಮಾನಗಳಿಂದಲೂ ಹೊರಗಿನವರ ಆಕ್ರಮಣ ನಡೆಯುತ್ತಲೇ ಇದೆ, ಮೊಘಲರ ನಿರಂತರ ದಾಳಿಗೆ ತುತ್ತಾಗಿ ಅಸಂಖ್ಯಾತ ಹಿಂದೂ ದೇವಾಲಯಗಳು ಭಗ್ನಗೊಂಡಿರುವುದಕ್ಕೆ, ನಾಮಾವಶೇಷಗೊಂಡಿರುವುದಕ್ಕೆ ಇಂದಿಗೂ ಸಾಕ್ಷಿ, ಪುರಾವೆಗಳು ನಮ್ಮ ಕಣ್ಣಿಗೆ ರಾಚುತ್ತಿವೆ. ಎಷ್ಟೇ ದುರಾಕ್ರಮಣಗಳು ನಡೆದರೂ ಬಹುತ್ವ ಸಂಸ್ಕೃತಿಯ ಹಿಂದುತ್ವದ ಭಾರತ ಗಟ್ಟಿಯಾಗಿ ಉಳಿಯಲಿದೆ.

ಸ್ವಾತಂತ್ರ್ಯ ನಂತರವೂ ಮತಬ್ಯಾಂಕ್  ರಾಜಕಾರಣಕ್ಕಾಗಿ ಹಿಂದುತ್ವವನ್ನು ದಮನ ಮಾಡಲು ಕುಮ್ಮಕ್ಕು ನೀಡುತ್ತಿದ್ದ ಕಾಂಗ್ರೆಸ್ ಕುತಂತ್ರವನ್ನು ಬಗ್ಗು ಬಡಿಯಲೆಂದೇ ‘ಭಾರತೀಯ ಜನತಾ ಪಾರ್ಟಿ’ ಜನ್ಮತಾಳಿದ್ದು. ಕಾಂಗ್ರೆಸ್’ನ ಸ್ವಾರ್ಥ ಹಾಗೂ ನಿರಂಕುಶ ಪ್ರಭುತ್ವದ ಆಡಳಿತವನ್ನು ಮೂಲೆಗಟ್ಟಿ ದೇಶದ ಜನರು ಇಂದು ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿ ಅದರ ನೆರಳಲ್ಲಿ ಅಭಿವೃದ್ಧಿಯ ಭಾರತವನ್ನು ಕಾಣುತ್ತಿದ್ದಾರೆ.

ರಾಜಕೀಯ ಭೂಪಟದಲ್ಲಿ ‘ಅಳಿಸಿ ಹೊಗುತ್ತಿರುವ ಕಾಂಗ್ರೆಸ್ ಅಸ್ತಿತ್ವವನ್ನು ಮೊದಲು ಉಳಿಸಿಕೊಳ್ಳಿ’, ಆ ನಂತರ ರಾಷ್ಟ್ರದ ಕುರಿತು ನೀವು ಮಾತನಾಡುವಿರಂತೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಹೇಳಿದ್ದೇನು? : ಭಾರತದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್‌, ಮುಸ್ಲಿಂ, ಬೌಧ್ಧ, ಜೈನ ಎಲ್ಲರೂ ಇದ್ದಾರೆ. ಭಾರತವನ್ನು ಕೇವಲ ಹಿಂದೂ ರಾಷ್ಟ್ರ ಎಂದಯ ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ದಾಂತವಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಗುವುದಿಲ್ಲ ಎಂದು ಹೇಳಿದ್ದರು.

https://x.com/BYVijayendra/status/1736650526434230614?s=20

andolanait

Recent Posts

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

2 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

2 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

2 hours ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ…

2 hours ago

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…

2 hours ago