ರಾಜ್ಯ

ಮೊಘಲರು ಹುಟ್ಟಿ ಬಂದ್ರೂ ಹಿಂದೂ ರಾಷ್ಟ್ರ ಕಲ್ಪನೆಯನ್ನು ತಡೆಯಲು ಸಾಧ್ಯವಿಲ್ಲ: ವಿಜಯೇಂದ್ರ

ಬೆಂಗಳೂರು : “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪವಾಗಿದೆ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಹಿಂದೂಗಳು ಉಳಿಯಬೇಕಾದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಹಿಂದೂ ರಾಷ್ಟ್ರ ನಿರ್ಮಾಣ ಆಗುವುದಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಪೂಜ್ಯ ಪೇಜಾವರ ಶ್ರೀಗಳ ‘ಹಿಂದೂ ರಾಷ್ಟ್ರದ ಪ್ರತಿಪಾದನೆ’ ಇನ್ನೊಬ್ಬರನ್ನು ಹೊರಗಟ್ಟುವುದಲ್ಲ, ಬಲವಂತ ಮತಾಂತರವಲ್ಲ, ಎಲ್ಲರನ್ನೂ ಒಳಗೊಂಡ ನೈಜ ಭಾರತೀಯತೆಯನ್ನು ರಕ್ಷಿಸುವುದು ಭಾರತದ ಅಸ್ತಿತ್ವವಾಗಿದೆ ಎಂದು ಅಭಿಪ್ರಯಾಪಟ್ಟಿದ್ದಾರೆ.

ಭಾರತವೆಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಹುತ್ವ, ವಿವಿಧತೆಯನ್ನು ತನ್ನ ಒಡಲಲ್ಲಿರಿಸಿಕೊಂಡು ಏಕತೆಯನ್ನು ಮೆರೆಯುತ್ತಿರುವುದೇ ಭಾರತೀಯತೆಯಾಗಿದೆ. ಈ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲು ಶತ ಶತಮಾನಗಳಿಂದಲೂ ಹೊರಗಿನವರ ಆಕ್ರಮಣ ನಡೆಯುತ್ತಲೇ ಇದೆ, ಮೊಘಲರ ನಿರಂತರ ದಾಳಿಗೆ ತುತ್ತಾಗಿ ಅಸಂಖ್ಯಾತ ಹಿಂದೂ ದೇವಾಲಯಗಳು ಭಗ್ನಗೊಂಡಿರುವುದಕ್ಕೆ, ನಾಮಾವಶೇಷಗೊಂಡಿರುವುದಕ್ಕೆ ಇಂದಿಗೂ ಸಾಕ್ಷಿ, ಪುರಾವೆಗಳು ನಮ್ಮ ಕಣ್ಣಿಗೆ ರಾಚುತ್ತಿವೆ. ಎಷ್ಟೇ ದುರಾಕ್ರಮಣಗಳು ನಡೆದರೂ ಬಹುತ್ವ ಸಂಸ್ಕೃತಿಯ ಹಿಂದುತ್ವದ ಭಾರತ ಗಟ್ಟಿಯಾಗಿ ಉಳಿಯಲಿದೆ.

ಸ್ವಾತಂತ್ರ್ಯ ನಂತರವೂ ಮತಬ್ಯಾಂಕ್  ರಾಜಕಾರಣಕ್ಕಾಗಿ ಹಿಂದುತ್ವವನ್ನು ದಮನ ಮಾಡಲು ಕುಮ್ಮಕ್ಕು ನೀಡುತ್ತಿದ್ದ ಕಾಂಗ್ರೆಸ್ ಕುತಂತ್ರವನ್ನು ಬಗ್ಗು ಬಡಿಯಲೆಂದೇ ‘ಭಾರತೀಯ ಜನತಾ ಪಾರ್ಟಿ’ ಜನ್ಮತಾಳಿದ್ದು. ಕಾಂಗ್ರೆಸ್’ನ ಸ್ವಾರ್ಥ ಹಾಗೂ ನಿರಂಕುಶ ಪ್ರಭುತ್ವದ ಆಡಳಿತವನ್ನು ಮೂಲೆಗಟ್ಟಿ ದೇಶದ ಜನರು ಇಂದು ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿ ಅದರ ನೆರಳಲ್ಲಿ ಅಭಿವೃದ್ಧಿಯ ಭಾರತವನ್ನು ಕಾಣುತ್ತಿದ್ದಾರೆ.

ರಾಜಕೀಯ ಭೂಪಟದಲ್ಲಿ ‘ಅಳಿಸಿ ಹೊಗುತ್ತಿರುವ ಕಾಂಗ್ರೆಸ್ ಅಸ್ತಿತ್ವವನ್ನು ಮೊದಲು ಉಳಿಸಿಕೊಳ್ಳಿ’, ಆ ನಂತರ ರಾಷ್ಟ್ರದ ಕುರಿತು ನೀವು ಮಾತನಾಡುವಿರಂತೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಹೇಳಿದ್ದೇನು? : ಭಾರತದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್‌, ಮುಸ್ಲಿಂ, ಬೌಧ್ಧ, ಜೈನ ಎಲ್ಲರೂ ಇದ್ದಾರೆ. ಭಾರತವನ್ನು ಕೇವಲ ಹಿಂದೂ ರಾಷ್ಟ್ರ ಎಂದಯ ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ದಾಂತವಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಗುವುದಿಲ್ಲ ಎಂದು ಹೇಳಿದ್ದರು.

https://x.com/BYVijayendra/status/1736650526434230614?s=20

andolanait

Recent Posts

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

16 mins ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

34 mins ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

41 mins ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

59 mins ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…

1 hour ago

ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…

2 hours ago