ರಾಜ್ಯ

ಮೊಘಲರು ಹುಟ್ಟಿ ಬಂದ್ರೂ ಹಿಂದೂ ರಾಷ್ಟ್ರ ಕಲ್ಪನೆಯನ್ನು ತಡೆಯಲು ಸಾಧ್ಯವಿಲ್ಲ: ವಿಜಯೇಂದ್ರ

ಬೆಂಗಳೂರು : “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪವಾಗಿದೆ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಹಿಂದೂಗಳು ಉಳಿಯಬೇಕಾದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಹಿಂದೂ ರಾಷ್ಟ್ರ ನಿರ್ಮಾಣ ಆಗುವುದಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಪೂಜ್ಯ ಪೇಜಾವರ ಶ್ರೀಗಳ ‘ಹಿಂದೂ ರಾಷ್ಟ್ರದ ಪ್ರತಿಪಾದನೆ’ ಇನ್ನೊಬ್ಬರನ್ನು ಹೊರಗಟ್ಟುವುದಲ್ಲ, ಬಲವಂತ ಮತಾಂತರವಲ್ಲ, ಎಲ್ಲರನ್ನೂ ಒಳಗೊಂಡ ನೈಜ ಭಾರತೀಯತೆಯನ್ನು ರಕ್ಷಿಸುವುದು ಭಾರತದ ಅಸ್ತಿತ್ವವಾಗಿದೆ ಎಂದು ಅಭಿಪ್ರಯಾಪಟ್ಟಿದ್ದಾರೆ.

ಭಾರತವೆಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಹುತ್ವ, ವಿವಿಧತೆಯನ್ನು ತನ್ನ ಒಡಲಲ್ಲಿರಿಸಿಕೊಂಡು ಏಕತೆಯನ್ನು ಮೆರೆಯುತ್ತಿರುವುದೇ ಭಾರತೀಯತೆಯಾಗಿದೆ. ಈ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲು ಶತ ಶತಮಾನಗಳಿಂದಲೂ ಹೊರಗಿನವರ ಆಕ್ರಮಣ ನಡೆಯುತ್ತಲೇ ಇದೆ, ಮೊಘಲರ ನಿರಂತರ ದಾಳಿಗೆ ತುತ್ತಾಗಿ ಅಸಂಖ್ಯಾತ ಹಿಂದೂ ದೇವಾಲಯಗಳು ಭಗ್ನಗೊಂಡಿರುವುದಕ್ಕೆ, ನಾಮಾವಶೇಷಗೊಂಡಿರುವುದಕ್ಕೆ ಇಂದಿಗೂ ಸಾಕ್ಷಿ, ಪುರಾವೆಗಳು ನಮ್ಮ ಕಣ್ಣಿಗೆ ರಾಚುತ್ತಿವೆ. ಎಷ್ಟೇ ದುರಾಕ್ರಮಣಗಳು ನಡೆದರೂ ಬಹುತ್ವ ಸಂಸ್ಕೃತಿಯ ಹಿಂದುತ್ವದ ಭಾರತ ಗಟ್ಟಿಯಾಗಿ ಉಳಿಯಲಿದೆ.

ಸ್ವಾತಂತ್ರ್ಯ ನಂತರವೂ ಮತಬ್ಯಾಂಕ್  ರಾಜಕಾರಣಕ್ಕಾಗಿ ಹಿಂದುತ್ವವನ್ನು ದಮನ ಮಾಡಲು ಕುಮ್ಮಕ್ಕು ನೀಡುತ್ತಿದ್ದ ಕಾಂಗ್ರೆಸ್ ಕುತಂತ್ರವನ್ನು ಬಗ್ಗು ಬಡಿಯಲೆಂದೇ ‘ಭಾರತೀಯ ಜನತಾ ಪಾರ್ಟಿ’ ಜನ್ಮತಾಳಿದ್ದು. ಕಾಂಗ್ರೆಸ್’ನ ಸ್ವಾರ್ಥ ಹಾಗೂ ನಿರಂಕುಶ ಪ್ರಭುತ್ವದ ಆಡಳಿತವನ್ನು ಮೂಲೆಗಟ್ಟಿ ದೇಶದ ಜನರು ಇಂದು ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿ ಅದರ ನೆರಳಲ್ಲಿ ಅಭಿವೃದ್ಧಿಯ ಭಾರತವನ್ನು ಕಾಣುತ್ತಿದ್ದಾರೆ.

ರಾಜಕೀಯ ಭೂಪಟದಲ್ಲಿ ‘ಅಳಿಸಿ ಹೊಗುತ್ತಿರುವ ಕಾಂಗ್ರೆಸ್ ಅಸ್ತಿತ್ವವನ್ನು ಮೊದಲು ಉಳಿಸಿಕೊಳ್ಳಿ’, ಆ ನಂತರ ರಾಷ್ಟ್ರದ ಕುರಿತು ನೀವು ಮಾತನಾಡುವಿರಂತೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಹೇಳಿದ್ದೇನು? : ಭಾರತದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್‌, ಮುಸ್ಲಿಂ, ಬೌಧ್ಧ, ಜೈನ ಎಲ್ಲರೂ ಇದ್ದಾರೆ. ಭಾರತವನ್ನು ಕೇವಲ ಹಿಂದೂ ರಾಷ್ಟ್ರ ಎಂದಯ ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ದಾಂತವಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಗುವುದಿಲ್ಲ ಎಂದು ಹೇಳಿದ್ದರು.

https://x.com/BYVijayendra/status/1736650526434230614?s=20

andolanait

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

9 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

12 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

13 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

13 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

13 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

14 hours ago