ರಾಜ್ಯ

ಮೊಘಲರು ಹುಟ್ಟಿ ಬಂದ್ರೂ ಹಿಂದೂ ರಾಷ್ಟ್ರ ಕಲ್ಪನೆಯನ್ನು ತಡೆಯಲು ಸಾಧ್ಯವಿಲ್ಲ: ವಿಜಯೇಂದ್ರ

ಬೆಂಗಳೂರು : “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪವಾಗಿದೆ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಹಿಂದೂಗಳು ಉಳಿಯಬೇಕಾದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಹಿಂದೂ ರಾಷ್ಟ್ರ ನಿರ್ಮಾಣ ಆಗುವುದಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಪೂಜ್ಯ ಪೇಜಾವರ ಶ್ರೀಗಳ ‘ಹಿಂದೂ ರಾಷ್ಟ್ರದ ಪ್ರತಿಪಾದನೆ’ ಇನ್ನೊಬ್ಬರನ್ನು ಹೊರಗಟ್ಟುವುದಲ್ಲ, ಬಲವಂತ ಮತಾಂತರವಲ್ಲ, ಎಲ್ಲರನ್ನೂ ಒಳಗೊಂಡ ನೈಜ ಭಾರತೀಯತೆಯನ್ನು ರಕ್ಷಿಸುವುದು ಭಾರತದ ಅಸ್ತಿತ್ವವಾಗಿದೆ ಎಂದು ಅಭಿಪ್ರಯಾಪಟ್ಟಿದ್ದಾರೆ.

ಭಾರತವೆಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಹುತ್ವ, ವಿವಿಧತೆಯನ್ನು ತನ್ನ ಒಡಲಲ್ಲಿರಿಸಿಕೊಂಡು ಏಕತೆಯನ್ನು ಮೆರೆಯುತ್ತಿರುವುದೇ ಭಾರತೀಯತೆಯಾಗಿದೆ. ಈ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲು ಶತ ಶತಮಾನಗಳಿಂದಲೂ ಹೊರಗಿನವರ ಆಕ್ರಮಣ ನಡೆಯುತ್ತಲೇ ಇದೆ, ಮೊಘಲರ ನಿರಂತರ ದಾಳಿಗೆ ತುತ್ತಾಗಿ ಅಸಂಖ್ಯಾತ ಹಿಂದೂ ದೇವಾಲಯಗಳು ಭಗ್ನಗೊಂಡಿರುವುದಕ್ಕೆ, ನಾಮಾವಶೇಷಗೊಂಡಿರುವುದಕ್ಕೆ ಇಂದಿಗೂ ಸಾಕ್ಷಿ, ಪುರಾವೆಗಳು ನಮ್ಮ ಕಣ್ಣಿಗೆ ರಾಚುತ್ತಿವೆ. ಎಷ್ಟೇ ದುರಾಕ್ರಮಣಗಳು ನಡೆದರೂ ಬಹುತ್ವ ಸಂಸ್ಕೃತಿಯ ಹಿಂದುತ್ವದ ಭಾರತ ಗಟ್ಟಿಯಾಗಿ ಉಳಿಯಲಿದೆ.

ಸ್ವಾತಂತ್ರ್ಯ ನಂತರವೂ ಮತಬ್ಯಾಂಕ್  ರಾಜಕಾರಣಕ್ಕಾಗಿ ಹಿಂದುತ್ವವನ್ನು ದಮನ ಮಾಡಲು ಕುಮ್ಮಕ್ಕು ನೀಡುತ್ತಿದ್ದ ಕಾಂಗ್ರೆಸ್ ಕುತಂತ್ರವನ್ನು ಬಗ್ಗು ಬಡಿಯಲೆಂದೇ ‘ಭಾರತೀಯ ಜನತಾ ಪಾರ್ಟಿ’ ಜನ್ಮತಾಳಿದ್ದು. ಕಾಂಗ್ರೆಸ್’ನ ಸ್ವಾರ್ಥ ಹಾಗೂ ನಿರಂಕುಶ ಪ್ರಭುತ್ವದ ಆಡಳಿತವನ್ನು ಮೂಲೆಗಟ್ಟಿ ದೇಶದ ಜನರು ಇಂದು ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿ ಅದರ ನೆರಳಲ್ಲಿ ಅಭಿವೃದ್ಧಿಯ ಭಾರತವನ್ನು ಕಾಣುತ್ತಿದ್ದಾರೆ.

ರಾಜಕೀಯ ಭೂಪಟದಲ್ಲಿ ‘ಅಳಿಸಿ ಹೊಗುತ್ತಿರುವ ಕಾಂಗ್ರೆಸ್ ಅಸ್ತಿತ್ವವನ್ನು ಮೊದಲು ಉಳಿಸಿಕೊಳ್ಳಿ’, ಆ ನಂತರ ರಾಷ್ಟ್ರದ ಕುರಿತು ನೀವು ಮಾತನಾಡುವಿರಂತೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಹೇಳಿದ್ದೇನು? : ಭಾರತದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್‌, ಮುಸ್ಲಿಂ, ಬೌಧ್ಧ, ಜೈನ ಎಲ್ಲರೂ ಇದ್ದಾರೆ. ಭಾರತವನ್ನು ಕೇವಲ ಹಿಂದೂ ರಾಷ್ಟ್ರ ಎಂದಯ ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ದಾಂತವಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಗುವುದಿಲ್ಲ ಎಂದು ಹೇಳಿದ್ದರು.

https://x.com/BYVijayendra/status/1736650526434230614?s=20

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

5 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

15 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

20 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

20 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

20 hours ago