ಬೆಂಗಳೂರು : “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪವಾಗಿದೆ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
ಹಿಂದೂಗಳು ಉಳಿಯಬೇಕಾದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಹಿಂದೂ ರಾಷ್ಟ್ರ ನಿರ್ಮಾಣ ಆಗುವುದಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು ಪೂಜ್ಯ ಪೇಜಾವರ ಶ್ರೀಗಳ ‘ಹಿಂದೂ ರಾಷ್ಟ್ರದ ಪ್ರತಿಪಾದನೆ’ ಇನ್ನೊಬ್ಬರನ್ನು ಹೊರಗಟ್ಟುವುದಲ್ಲ, ಬಲವಂತ ಮತಾಂತರವಲ್ಲ, ಎಲ್ಲರನ್ನೂ ಒಳಗೊಂಡ ನೈಜ ಭಾರತೀಯತೆಯನ್ನು ರಕ್ಷಿಸುವುದು ಭಾರತದ ಅಸ್ತಿತ್ವವಾಗಿದೆ ಎಂದು ಅಭಿಪ್ರಯಾಪಟ್ಟಿದ್ದಾರೆ.
ಭಾರತವೆಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಹುತ್ವ, ವಿವಿಧತೆಯನ್ನು ತನ್ನ ಒಡಲಲ್ಲಿರಿಸಿಕೊಂಡು ಏಕತೆಯನ್ನು ಮೆರೆಯುತ್ತಿರುವುದೇ ಭಾರತೀಯತೆಯಾಗಿದೆ. ಈ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲು ಶತ ಶತಮಾನಗಳಿಂದಲೂ ಹೊರಗಿನವರ ಆಕ್ರಮಣ ನಡೆಯುತ್ತಲೇ ಇದೆ, ಮೊಘಲರ ನಿರಂತರ ದಾಳಿಗೆ ತುತ್ತಾಗಿ ಅಸಂಖ್ಯಾತ ಹಿಂದೂ ದೇವಾಲಯಗಳು ಭಗ್ನಗೊಂಡಿರುವುದಕ್ಕೆ, ನಾಮಾವಶೇಷಗೊಂಡಿರುವುದಕ್ಕೆ ಇಂದಿಗೂ ಸಾಕ್ಷಿ, ಪುರಾವೆಗಳು ನಮ್ಮ ಕಣ್ಣಿಗೆ ರಾಚುತ್ತಿವೆ. ಎಷ್ಟೇ ದುರಾಕ್ರಮಣಗಳು ನಡೆದರೂ ಬಹುತ್ವ ಸಂಸ್ಕೃತಿಯ ಹಿಂದುತ್ವದ ಭಾರತ ಗಟ್ಟಿಯಾಗಿ ಉಳಿಯಲಿದೆ.
ಸ್ವಾತಂತ್ರ್ಯ ನಂತರವೂ ಮತಬ್ಯಾಂಕ್ ರಾಜಕಾರಣಕ್ಕಾಗಿ ಹಿಂದುತ್ವವನ್ನು ದಮನ ಮಾಡಲು ಕುಮ್ಮಕ್ಕು ನೀಡುತ್ತಿದ್ದ ಕಾಂಗ್ರೆಸ್ ಕುತಂತ್ರವನ್ನು ಬಗ್ಗು ಬಡಿಯಲೆಂದೇ ‘ಭಾರತೀಯ ಜನತಾ ಪಾರ್ಟಿ’ ಜನ್ಮತಾಳಿದ್ದು. ಕಾಂಗ್ರೆಸ್’ನ ಸ್ವಾರ್ಥ ಹಾಗೂ ನಿರಂಕುಶ ಪ್ರಭುತ್ವದ ಆಡಳಿತವನ್ನು ಮೂಲೆಗಟ್ಟಿ ದೇಶದ ಜನರು ಇಂದು ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿ ಅದರ ನೆರಳಲ್ಲಿ ಅಭಿವೃದ್ಧಿಯ ಭಾರತವನ್ನು ಕಾಣುತ್ತಿದ್ದಾರೆ.
ರಾಜಕೀಯ ಭೂಪಟದಲ್ಲಿ ‘ಅಳಿಸಿ ಹೊಗುತ್ತಿರುವ ಕಾಂಗ್ರೆಸ್ ಅಸ್ತಿತ್ವವನ್ನು ಮೊದಲು ಉಳಿಸಿಕೊಳ್ಳಿ’, ಆ ನಂತರ ರಾಷ್ಟ್ರದ ಕುರಿತು ನೀವು ಮಾತನಾಡುವಿರಂತೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಹೇಳಿದ್ದೇನು? : ಭಾರತದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್, ಮುಸ್ಲಿಂ, ಬೌಧ್ಧ, ಜೈನ ಎಲ್ಲರೂ ಇದ್ದಾರೆ. ಭಾರತವನ್ನು ಕೇವಲ ಹಿಂದೂ ರಾಷ್ಟ್ರ ಎಂದಯ ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ದಾಂತವಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಗುವುದಿಲ್ಲ ಎಂದು ಹೇಳಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…