ರಾಜ್ಯ

ಮೊಘಲರು ಹುಟ್ಟಿ ಬಂದ್ರೂ ಹಿಂದೂ ರಾಷ್ಟ್ರ ಕಲ್ಪನೆಯನ್ನು ತಡೆಯಲು ಸಾಧ್ಯವಿಲ್ಲ: ವಿಜಯೇಂದ್ರ

ಬೆಂಗಳೂರು : “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪವಾಗಿದೆ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಹಿಂದೂಗಳು ಉಳಿಯಬೇಕಾದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಹಿಂದೂ ರಾಷ್ಟ್ರ ನಿರ್ಮಾಣ ಆಗುವುದಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಪೂಜ್ಯ ಪೇಜಾವರ ಶ್ರೀಗಳ ‘ಹಿಂದೂ ರಾಷ್ಟ್ರದ ಪ್ರತಿಪಾದನೆ’ ಇನ್ನೊಬ್ಬರನ್ನು ಹೊರಗಟ್ಟುವುದಲ್ಲ, ಬಲವಂತ ಮತಾಂತರವಲ್ಲ, ಎಲ್ಲರನ್ನೂ ಒಳಗೊಂಡ ನೈಜ ಭಾರತೀಯತೆಯನ್ನು ರಕ್ಷಿಸುವುದು ಭಾರತದ ಅಸ್ತಿತ್ವವಾಗಿದೆ ಎಂದು ಅಭಿಪ್ರಯಾಪಟ್ಟಿದ್ದಾರೆ.

ಭಾರತವೆಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಹುತ್ವ, ವಿವಿಧತೆಯನ್ನು ತನ್ನ ಒಡಲಲ್ಲಿರಿಸಿಕೊಂಡು ಏಕತೆಯನ್ನು ಮೆರೆಯುತ್ತಿರುವುದೇ ಭಾರತೀಯತೆಯಾಗಿದೆ. ಈ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲು ಶತ ಶತಮಾನಗಳಿಂದಲೂ ಹೊರಗಿನವರ ಆಕ್ರಮಣ ನಡೆಯುತ್ತಲೇ ಇದೆ, ಮೊಘಲರ ನಿರಂತರ ದಾಳಿಗೆ ತುತ್ತಾಗಿ ಅಸಂಖ್ಯಾತ ಹಿಂದೂ ದೇವಾಲಯಗಳು ಭಗ್ನಗೊಂಡಿರುವುದಕ್ಕೆ, ನಾಮಾವಶೇಷಗೊಂಡಿರುವುದಕ್ಕೆ ಇಂದಿಗೂ ಸಾಕ್ಷಿ, ಪುರಾವೆಗಳು ನಮ್ಮ ಕಣ್ಣಿಗೆ ರಾಚುತ್ತಿವೆ. ಎಷ್ಟೇ ದುರಾಕ್ರಮಣಗಳು ನಡೆದರೂ ಬಹುತ್ವ ಸಂಸ್ಕೃತಿಯ ಹಿಂದುತ್ವದ ಭಾರತ ಗಟ್ಟಿಯಾಗಿ ಉಳಿಯಲಿದೆ.

ಸ್ವಾತಂತ್ರ್ಯ ನಂತರವೂ ಮತಬ್ಯಾಂಕ್  ರಾಜಕಾರಣಕ್ಕಾಗಿ ಹಿಂದುತ್ವವನ್ನು ದಮನ ಮಾಡಲು ಕುಮ್ಮಕ್ಕು ನೀಡುತ್ತಿದ್ದ ಕಾಂಗ್ರೆಸ್ ಕುತಂತ್ರವನ್ನು ಬಗ್ಗು ಬಡಿಯಲೆಂದೇ ‘ಭಾರತೀಯ ಜನತಾ ಪಾರ್ಟಿ’ ಜನ್ಮತಾಳಿದ್ದು. ಕಾಂಗ್ರೆಸ್’ನ ಸ್ವಾರ್ಥ ಹಾಗೂ ನಿರಂಕುಶ ಪ್ರಭುತ್ವದ ಆಡಳಿತವನ್ನು ಮೂಲೆಗಟ್ಟಿ ದೇಶದ ಜನರು ಇಂದು ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿ ಅದರ ನೆರಳಲ್ಲಿ ಅಭಿವೃದ್ಧಿಯ ಭಾರತವನ್ನು ಕಾಣುತ್ತಿದ್ದಾರೆ.

ರಾಜಕೀಯ ಭೂಪಟದಲ್ಲಿ ‘ಅಳಿಸಿ ಹೊಗುತ್ತಿರುವ ಕಾಂಗ್ರೆಸ್ ಅಸ್ತಿತ್ವವನ್ನು ಮೊದಲು ಉಳಿಸಿಕೊಳ್ಳಿ’, ಆ ನಂತರ ರಾಷ್ಟ್ರದ ಕುರಿತು ನೀವು ಮಾತನಾಡುವಿರಂತೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಹೇಳಿದ್ದೇನು? : ಭಾರತದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್‌, ಮುಸ್ಲಿಂ, ಬೌಧ್ಧ, ಜೈನ ಎಲ್ಲರೂ ಇದ್ದಾರೆ. ಭಾರತವನ್ನು ಕೇವಲ ಹಿಂದೂ ರಾಷ್ಟ್ರ ಎಂದಯ ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ದಾಂತವಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಗುವುದಿಲ್ಲ ಎಂದು ಹೇಳಿದ್ದರು.

https://x.com/BYVijayendra/status/1736650526434230614?s=20

andolanait

Recent Posts

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

9 mins ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

24 mins ago

ಹಾಸನ: ವೇದಿಕೆ ಮೇಲೆಯೇ ಗಳಗಳನೆ ಕಣ್ಣೀರು ಹಾಕಿದ ಎಚ್.ಡಿ.ರೇವಣ್ಣ

ಹಾಸನ: ಜಿಲ್ಲೆಯ ಹೊಳೆನರಸೀಪುರ ವ್ಯಾಪ್ತಿಯಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಭಾವುಕರಾಗಿ ಕಣ್ಣೀರು…

33 mins ago

ಮೇ.20ರೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಸಲೀಂ ಅಹಮ್ಮದ್‌

ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್‌ ಕಾಂಗ್ರೆಸ್‌ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ ತಿಳಿಸಿದ್ದಾರೆ.…

1 hour ago

ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ: ಇಳಿಕೆಯಾಗುತ್ತಿರುವ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು…

1 hour ago

ಸಚಿವ ಡಿ.ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ: ಮುಂದುವರಿದ ಚಿಕಿತ್ಸೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ…

2 hours ago