ರಾಜ್ಯ

ಬಜೆಟ್‌ ಪೂರ್ವಭಾವಿ ಸಭೆಗಳ ವಿರುದ್ಧ ಮುಖ್ಯಮಂತ್ರಿ ಚಂದ್ರು ಅಸಮಾಧಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಬಜೆಟ್‌ ಪೂರ್ವಭಾವಿ ಸಭೆಗಳಿಗೆ ಅಲ್ಪಸಂಖ್ಯಾತ ಸಮುದಾಯಗಳ ಎಲ್ಲಾ ಮುಖಂಡರನ್ನು ಕರೆದು, ಇದುವರೆಗೂ ಚರ್ಚೆ ನಡೆಸದೇ ಇರುವುದು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಧಕ್ಕೆ ತರುವಂತಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿರುವ ಅವರು, ಈಗಾಗಲೇ ದಲಿತ ಹಾಗೂ ಹಿಂದುಳಿದ ವರ್ಗಗಳ ಅನೇಕ ಸಂಘ-ಸಂಸ್ಥೆಗಳು ಮತ್ತು ನಾಯಕರೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಆಲಿಸಿ, ಬಜೆಟ್‌ ಪೂರ್ವ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೀರಿ. ಆದರೆ, ಅಲ್ಪಸಂಖ್ಯಾತ ಸಮುದಾಯವನ್ನು ಪ್ರತಿನಿಧಿಸುವ ಮುಖಂಡರೊಂದಿಗೆ ಸಭೆ ನಡೆಸದೇ ಸಚಿವರೊಬ್ಬರೊಬ್ಬರೇ ಎಲ್ಲಾ ಅಲ್ಪಸಂಖ್ಯಾತ ಧ್ವನಿ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ದೂರಿದರು.

ಇನ್ನು ಅಲ್ಪಸಂಖ್ಯಾತರಲ್ಲಿ ಮುಸ್ಲಿಂ. ಕ್ರೈಸ್ತ, ಜೈನ, ಬೌದ್ಧ, ಪಾರ್ಸಿ, ಸಿಖ್‌ ಸಮುದಾಯಗಳೂ ಇವೆ. ಆದರೆ, ಇತ್ತೀಚೆಗೆ ಆಳುವವರು ಇದನ್ನು ಮರೆತು ಹೋಗಿದ್ದಾರೆ. ಬಜೆಟ್‌ ಪೂರ್ವಭಾವಿ ಸಭೆಗೆ ಅಲ್ಪಸಂಖ್ಯಾತ ಸಮುದಾಯಗಳ ಎಲ್ಲಾ ಮುಖಂಡರು, ಸಂಘ-ಸಂಸ್ಥೆಗಳನ್ನು ಕರೆಯಬೇಕು. ಈ ಸಮುದಾಯಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

2 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

2 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

2 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

2 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

2 hours ago