ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಬಜೆಟ್ ಪೂರ್ವಭಾವಿ ಸಭೆಗಳಿಗೆ ಅಲ್ಪಸಂಖ್ಯಾತ ಸಮುದಾಯಗಳ ಎಲ್ಲಾ ಮುಖಂಡರನ್ನು ಕರೆದು, ಇದುವರೆಗೂ ಚರ್ಚೆ ನಡೆಸದೇ ಇರುವುದು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಧಕ್ಕೆ ತರುವಂತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿರುವ ಅವರು, ಈಗಾಗಲೇ ದಲಿತ ಹಾಗೂ ಹಿಂದುಳಿದ ವರ್ಗಗಳ ಅನೇಕ ಸಂಘ-ಸಂಸ್ಥೆಗಳು ಮತ್ತು ನಾಯಕರೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಆಲಿಸಿ, ಬಜೆಟ್ ಪೂರ್ವ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೀರಿ. ಆದರೆ, ಅಲ್ಪಸಂಖ್ಯಾತ ಸಮುದಾಯವನ್ನು ಪ್ರತಿನಿಧಿಸುವ ಮುಖಂಡರೊಂದಿಗೆ ಸಭೆ ನಡೆಸದೇ ಸಚಿವರೊಬ್ಬರೊಬ್ಬರೇ ಎಲ್ಲಾ ಅಲ್ಪಸಂಖ್ಯಾತ ಧ್ವನಿ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ದೂರಿದರು.
ಇನ್ನು ಅಲ್ಪಸಂಖ್ಯಾತರಲ್ಲಿ ಮುಸ್ಲಿಂ. ಕ್ರೈಸ್ತ, ಜೈನ, ಬೌದ್ಧ, ಪಾರ್ಸಿ, ಸಿಖ್ ಸಮುದಾಯಗಳೂ ಇವೆ. ಆದರೆ, ಇತ್ತೀಚೆಗೆ ಆಳುವವರು ಇದನ್ನು ಮರೆತು ಹೋಗಿದ್ದಾರೆ. ಬಜೆಟ್ ಪೂರ್ವಭಾವಿ ಸಭೆಗೆ ಅಲ್ಪಸಂಖ್ಯಾತ ಸಮುದಾಯಗಳ ಎಲ್ಲಾ ಮುಖಂಡರು, ಸಂಘ-ಸಂಸ್ಥೆಗಳನ್ನು ಕರೆಯಬೇಕು. ಈ ಸಮುದಾಯಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…