ರಾಜ್ಯ

ಬಜೆಟ್‌ ಪೂರ್ವಭಾವಿ ಸಭೆಗಳ ವಿರುದ್ಧ ಮುಖ್ಯಮಂತ್ರಿ ಚಂದ್ರು ಅಸಮಾಧಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಬಜೆಟ್‌ ಪೂರ್ವಭಾವಿ ಸಭೆಗಳಿಗೆ ಅಲ್ಪಸಂಖ್ಯಾತ ಸಮುದಾಯಗಳ ಎಲ್ಲಾ ಮುಖಂಡರನ್ನು ಕರೆದು, ಇದುವರೆಗೂ ಚರ್ಚೆ ನಡೆಸದೇ ಇರುವುದು ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಧಕ್ಕೆ ತರುವಂತಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿರುವ ಅವರು, ಈಗಾಗಲೇ ದಲಿತ ಹಾಗೂ ಹಿಂದುಳಿದ ವರ್ಗಗಳ ಅನೇಕ ಸಂಘ-ಸಂಸ್ಥೆಗಳು ಮತ್ತು ನಾಯಕರೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಆಲಿಸಿ, ಬಜೆಟ್‌ ಪೂರ್ವ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೀರಿ. ಆದರೆ, ಅಲ್ಪಸಂಖ್ಯಾತ ಸಮುದಾಯವನ್ನು ಪ್ರತಿನಿಧಿಸುವ ಮುಖಂಡರೊಂದಿಗೆ ಸಭೆ ನಡೆಸದೇ ಸಚಿವರೊಬ್ಬರೊಬ್ಬರೇ ಎಲ್ಲಾ ಅಲ್ಪಸಂಖ್ಯಾತ ಧ್ವನಿ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ದೂರಿದರು.

ಇನ್ನು ಅಲ್ಪಸಂಖ್ಯಾತರಲ್ಲಿ ಮುಸ್ಲಿಂ. ಕ್ರೈಸ್ತ, ಜೈನ, ಬೌದ್ಧ, ಪಾರ್ಸಿ, ಸಿಖ್‌ ಸಮುದಾಯಗಳೂ ಇವೆ. ಆದರೆ, ಇತ್ತೀಚೆಗೆ ಆಳುವವರು ಇದನ್ನು ಮರೆತು ಹೋಗಿದ್ದಾರೆ. ಬಜೆಟ್‌ ಪೂರ್ವಭಾವಿ ಸಭೆಗೆ ಅಲ್ಪಸಂಖ್ಯಾತ ಸಮುದಾಯಗಳ ಎಲ್ಲಾ ಮುಖಂಡರು, ಸಂಘ-ಸಂಸ್ಥೆಗಳನ್ನು ಕರೆಯಬೇಕು. ಈ ಸಮುದಾಯಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

1 hour ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

6 hours ago